ವಿಧಾನಸಭೆಯಲ್ಲಿ ತೊಡೆತಟ್ಟಿದ್ದ ಸಿದ್ದರಾಮಯ್ಯ ಬರೀ ಅಹಂಕಾರದ ಮಾತುಗಳನ್ನಾಡುತ್ತಾರೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 03, 2024 | 1:22 PM

ಜೆಡಿಎಸ್ ಈಗ ಬಿಜೆಪಿ ಜೊತೆ ಕೈ ಜೋಡಿಸಿರುವುದರಿಂದ ಪಕ್ಷದ ಹೆಸರಲ್ಲಿರುವ ಜಾತ್ಯಾತೀತ ಪದವನ್ನು ತೆಗೆದು ಹಾಕಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದಕ್ಕೆ ಜವಾಬು ನೀಡಿದ ಕುಮಾರಸ್ವಾಮಿ ಅಸಲಿಗೆ, ಒಕ್ಕಲಿಗ, ಲಿಂಗಾಯತ ಅಂತ ಜಾತಿ ರಾಜಕಾರಣ ಮಾಡುತ್ತಿರೋದೇ ಕಾಂಗ್ರೆಸ್ ಪಕ್ಷ, ಅವರಿಂದ ಹೇಳಿಸಿಕೊಳ್ಳಬೇಕಾದ್ದು ಏನೂ ಇಲ್ಲ ಎಂದರು

ಮೈಸೂರು: ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ ಒಡೆಯರ್ (Yaduveer Krishna Dutt Wodeyar) ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಜೊತೆಯಿರಲು ನಗರಕ್ಕೆ ಆಗಮಿಸಿರುವ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಡೋದೆಲ್ಲ ಅಹಂಕಾರದ ಮಾತುಗಳು ಅಂತ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಹಿಂದೆ ವಿಧಾನ ಸಭೆಯಲ್ಲಿ ಅವರು ಪೈಲ್ವಾನರ ಹಾಗೆ ಭುಜ ಮತ್ತು ತೊಡೆ ತಟ್ಟಿದ್ದರಲ್ಲ? ಅಂಥ ಕೆಲಸಗಳನ್ನು ತಾವು ಯಾವತ್ತೂ ಮಾಡಿಲ್ಲ ಎಂದರು. ಜೆಡಿಎಸ್ ಈಗ ಬಿಜೆಪಿ ಜೊತೆ ಕೈ ಜೋಡಿಸಿರುವುದರಿಂದ ಪಕ್ಷದ ಹೆಸರಲ್ಲಿರುವ ಜಾತ್ಯಾತೀತ ಪದವನ್ನು ತೆಗೆದು ಹಾಕಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದಕ್ಕೆ ಜವಾಬು ನೀಡಿದ ಕುಮಾರಸ್ವಾಮಿ ಅಸಲಿಗೆ, ಒಕ್ಕಲಿಗ, ಲಿಂಗಾಯತ ಅಂತ ಜಾತಿ ರಾಜಕಾರಣ ಮಾಡುತ್ತಿರೋದೇ ಕಾಂಗ್ರೆಸ್ ಪಕ್ಷ, ಅವರಿಂದ ಹೇಳಿಸಿಕೊಳ್ಳಬೇಕಾದ್ದು ಏನೂ ಇಲ್ಲ ಎಂದರು. ತಾನು ಎರಡು ದಿನಗಳ ಕಾಲ ಮೈಸೂರು ಮತ್ತು ಚಾಮರಾಜನಗರ ಕ್ಷೆತ್ರಗಳಲ್ಲಿ ಪ್ರಚಾರ ಮಾಡೋದಾಗಿ ಹೇಳಿದ ಕುಮಾರಸ್ವಾಮಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ದೇವೇಗೌಡ ಸಹ ಜೊತೆಗಿರಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅಪ್ಪಟ ಒಕ್ಕಲಿಗ: ಸಿದ್ದರಾಮಯ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.