Karnataka Budget 2025; ಸಿದ್ದರಾಮಯ್ಯ ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್ ಮಂಡಿಸಿದ್ದಾರೆ: ಶಿವರಾಂ ಹೆಬ್ಬಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 07, 2025 | 2:47 PM

ನೇಕಾರರಿಗೂ ಭರ್ಜರಿ ಕೊಡುಗೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ, ಹತ್ತು ಹೆಚ್ ಪಿ ವರೆಗಿನ ಮೋಟಾರುಗಳಿಗೆ ಸಿಗುತ್ತಿದ್ದ ಸಬ್ಸಿಡಿಯನ್ನು 20 ಹೆಚ್ ಪಿ ಮೋಟಾರುಗಳಿಗೆ ವಿಸ್ತರಿಸಿದ್ದಾರೆ, ಹಾಗೆಯೇ ಕರಾವಳಿ ಮತ್ತು ಮಲ್ನಾಡು ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ, ಕರಾವಳಿ ಪ್ರಾಂತ್ಯದಲ್ಲಿ ಕಡಲ ಕೊರೆತದಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಕ್ರಮತೆಗೆದುಕೊಳ್ಳಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಹೆಬ್ಬಾರ್ ಹೇಳಿದರು.

ಬೆಂಗಳೂರು, ಮಾರ್ಚ್ 7: ಬಿಜೆಪಿಯ ರೆಬೆಲ್ ಶಾಸಕರಲ್ಲಿ ಒಬ್ಬರಾಗಿರುವ ಶಿವರಾಂ ಹೆಬ್ಬಾರ್ (Shivaram Hebbar) ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅನ್ನು ಹಾಡಿ ಹೊಗಳಿದ್ದಾರೆ. ಇದೊಂದು ಸರ್ವಸ್ಪರ್ಶಿ ಮತ್ತು ಸರ್ವವ್ಯಾಪಿ ಬಜೆಟ್, ಅತ್ಯುತ್ತಮವಾದ ಬಜೆಟ್ ಮಂಡಿಸಿರುವುದಕ್ಕೆ ಮುಖ್ಯಮಂತ್ರಿಯವರನ್ನು ಅಭಿನಂದಿಸುತ್ತೇನೆ, ವಿಶೇಷವಾಗಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಅಡುಗೆ ಹೆಲ್ಪರ್​​ ಗಳಿಗೆ ಮತ್ತು ಮಾಧ್ಯಮದವರಿಗೆ ಗೌರವಧನ ಮತ್ತು ವೇತನಗಳನ್ನು ಹೆಚ್ಚಿಸಿ ಬಹಳ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೆಬ್ಬಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಸಿದ್ದರಾಮಯ್ಯ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಗೆ ಸಿಂಹಪಾಲು ಅನುದಾನ: ಯಾವ ಇಲಾಖೆ ಎಷ್ಟೆಷ್ಟು ಸಿಕ್ತು? ಇಲ್ಲಿದೆ ವಿವರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.