ಭಾರತೀಯರು ಶಾಂತಿಪ್ರಿಯರು ಅನ್ನೋದನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ: ಹೆಚ್​ಕೆ ಪಾಟೀಲ್, ಸಚಿವ

Updated on: Apr 28, 2025 | 11:13 AM

ಸದ್ಯದ ಸ್ಥಿತಿಯಲ್ಲಿ ಏನೇ ಹೇಳಿಕೆ ನೀಡಿದರೂ ಅದು ಚರ್ಚೆಗೆ ಈಡಾಗುತ್ತದೆ, ಇದು ಸೂಕ್ಷ್ಮ ವಿಷಯವಾಗಿರುವುದರಿಂದ ರಾಜಕೀಯ ಬೇಡ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ವಿಷಯದ ಸಂಪೂರ್ಣ ಮಾಹಿತಿಯಿದೆ, ಅವರು ತೆಗೆದುಕೊಳ್ಳುವ ನಿರ್ಣಯವೇ ಅಂತಿಮ, ಎಲ್ಲರೊಂದಿಗೆ ಚರ್ಚೆ ಮಾಡಿ ಪ್ರಧಾನಿಯವರೇ ಒಂದು ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎಂದು ಪಾಟೀಲ್ ಹೇಳಿದರು.

ಬೆಳಗಾವಿ, ಏಪ್ರಿಲ್ 28: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಕಿಸ್ತಾನದ ಜೊತೆ ಯುದ್ಧ ಬೇಕಿಲ್ಲ ಎಂದು ಹೇಳಿರುವುದು ವ್ಯಾಪಕ ಚರ್ಚೆಗೆ ಗುರಿಯಾಗಿದೆ. ಅವರು ಹೇಳಿಕೆಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್ (Law Minister HK Patil), ಭಾರತೀಯರು ಶಾಂತಿಪ್ರಿಯರು ಅನ್ನೋದು ಅವರ ಮಾತಿನ ಅರ್ಥವಾಗಿದೆ, ಹಿಂದೆ ಭಾರತದ ಜೊತೆ ಯಾರೇ ದುರ್ವರ್ತನೆ ಮಾಡಿದಾಗ, ಭಾರತೀಯರ ರಕ್ಷಣೆಗೋಸ್ಕರ ಯುದ್ಧ ಅನಿವಾರ್ಯ ಎಂದೆನಿಸಿದಾಗ ಭಾರತೀಯ ಸೇನೆ ವೈರಿಗಳನ್ನು ಸದೆಬಡಿದಿದ್ದು ಇತಿಹಾಸದಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ:   ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ, ಅಷ್ಟಕ್ಕೂ ಸುದ್ದಿಯಲ್ಲೇನಿದೆ?

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More