ನಂದಿ ಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ, ನಂದೀಶ್ವರ ದೇವಸ್ಥಾನದ ಬಳಿ ಮಾಧ್ಯಮಗಳೂ ಹೋಗುವಂತಿಲ್ಲ

Updated on: Jul 02, 2025 | 11:53 AM

ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೀ ಹೇಳುವ ಪ್ರಕಾರ ಸಂಪುಟ ಸಭೆಯ ಕಾರಣ, ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ, ಅವರೂ ಸೇರಿದಂತೆ ಮತ್ತೊಬ್ಬ ಎಸ್ ಪಿ, ಮೂವರು ಹೆಚ್ಚುವರಿ ಎಸ್​ಪಿ ಮತ್ತು 1,200 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ, ಕೆಎಸ್​ಆರ್​ಪಿ ತುಕುಡಿಗಳ ಸೇವೆಯನ್ನೂ ಪಡೆದುಕೊಳ್ಳಲಾಗುತ್ತಿದೆ.

ಚಿಕ್ಕಬಳ್ಳಾಪುರ, ಜುಲೈ 2: ಇವತ್ತು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ (Nandi Hills) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಅದಕ್ಕೂ ಮೊದಲು ಗಣ್ಯರು ಬೆಟ್ಟದ ಕೆಳಭಾಗದಲ್ಲಿರುವ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿಕೊಳ್ಳಲಿದ್ದಾರೆ. ನಮ್ಮ ಚಿಕ್ಕಬಳ್ಳಾಪುರ ವರದಿಗಾರ ನೀಡುವ ಮಾಹಿತಿಯ ಪ್ರಕಾರ ದೇವಸ್ಥಾನದ ಹತ್ತಿರ ಮಾಧ್ಯಮದವರೂ ಸೇರಿದಂತೆ ಯಾರನ್ನೂ ಬಿಡುತ್ತಿಲ್ಲ. ದೇವಸ್ಥಾನ ಪುರಾತತ್ವ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಅವರ ಅನುಮತಿ ಪಡೆಯಬೇಕು, ಮತ್ತು ಸ್ಥಳದ ಅಭಾವ ಕಾರಣ ಕ್ರೌಡ್​ ಹೆಚ್ಚುವುದನ್ನು ತಪ್ಪಿಸಲು ಯಾರನ್ನೂ ದೇವಸ್ಥಾನದ ಬಳಿ ಬರಲು ಬಿಡುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೀ ಹೇಳಿದರು.

ಇದನ್ನೂ ಓದಿ:    ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳುಮಾಡುವ ಪ್ರಯತ್ನ ನಡೆದಿದೆ: ಬಿಅರ್ ಪಾಟೀಲ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More