Siddaramaiah: ಅನ್ನಭಾಗ್ಯ ಯೋಜನೆ ಜಾರಿ ಸಿಎಮ್ ಸಿದ್ದರಾಮಯ್ಯರ ನಿದ್ರೆ ಭಾಗ್ಯ ಕಸಿದುಕೊಂಡಿದೆ!

Updated on: Jun 15, 2023 | 1:14 PM

ಸಭೆಗೆ ಅವರು ತಮ್ಮ ಎಂದಿನ ಗತ್ತಿನಲ್ಲಿ ವಿಧಾನ ಸೌಧಕ್ಕೆ ಆಗಮಿಸುತ್ತಿರುವದನ್ನು ವಿಡಿಯೋದಲ್ಲಿ ನೋಡಬಹುದು.

ಬೆಂಗಳೂರು: ಅನ್ನಭಾಗ್ಯ ಯೋಜನೆ (Anna Bhagya scheme) ಮುಖ್ಯಮಂತ್ರಿ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ನಿದ್ರೆ ಭಾಗ್ಯವನ್ನು ಕಸಿದುಕೊಂಡಂತಿದೆ. ಅನ್ನಬಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ (BPL families) ಅಕ್ಕಿ ವಿತರಿಸುವುದು ಸರ್ಕಾರದ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಅಕ್ಕಿ ನೀಡಿ ಎಂದು ಕೇಂದ್ರ ಸರ್ಕಾರದ ಮೊರೆಹೊಕ್ಕಿರುವ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಸಮಯಾವಾಕಾಶ ಸಹ ಕೋರಿದ್ದಾರೆ. ಏತನ್ಮಧ್ಯೆ, ಅನ್ನಭಾಗ್ಯ ಯೋಜನೆ ಜಾರಿಗೆ ತೊಡಕಾಗಿರುವ ಸಮಸ್ಯೆಗಳನ್ನು ಚರ್ಚಿಸಲು ಮುಖ್ಯಮಂತ್ರಿ ಸಂಪುಟ ಸಭೆಯೊಂದನ್ನು ಕರೆದಿದ್ದಾರೆ. ಸಭೆಗೆ ಅವರು ತಮ್ಮ ಎಂದಿನ ಗತ್ತಿನಲ್ಲಿ ವಿಧಾನ ಸೌಧಕ್ಕೆ ಆಗಮಿಸುತ್ತಿರುವದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More