ವಿಪಕ್ಷಗಳ ಆರೋಪಕ್ಕೆ ಸಿಎಂ ಟಕ್ಕರ್: ಬಿಜೆಪಿಗೆ ಸಿದ್ದರಾಮಯ್ಯ ಸವಾಲ್
ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂಬ ಆರೋಪಕ್ಕೆ ಕೌಂಟರ್ ಕೊಟ್ಟ ಮುಖ್ಯಮಂತ್ರಿಗಳು, ಚರ್ಚೆಗೆ ಬರಲಿ. ನಾನು ಲೆಕ್ಕ ಕೊಡಲು ತಯಾರಿದ್ದೇನೆ ಎಂದು ಸವಾಲು ಹಾಕಿದ್ದಾರೆ.
ಕೊಪ್ಪಳ, ಅಕ್ಟೋಬರ್ 06: ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದರೂ ವಿಪಕ್ಷಗಳು ನಮ್ಮ ಮೇಲೆ ಆರೋಪ ಮಾಡ್ತಿವೆ. ಗ್ಯಾರಂಟಿಗಳಿಂದ ಸರ್ಕಾರದ ಬಳಿ ದುಡ್ಡಿಲ್ಲದ ಕಾರಣ ಅಭಿವೃದ್ಧಿ ಕೆಲಸಗಳು ನಿಂತೋಗಿವೆ ಎಂದು ಆರೋಪಿಸುತ್ತಾರೆ. ಸರ್ಕಾರದ ಬಳಿ ದುಡ್ಡು ಇಲ್ಲದಿದ್ದರೆ ಕೊಪ್ಪಳದಲ್ಲಿಯೇ 2 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳನ್ನ ಮಾಡಲು ಆಗ್ತಿತ್ತಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ಕೊಟ್ಟಿದ್ದು, ಬಿಜೆಪಿಯವರು ಚರ್ಚೆಗೆ ಬರಲಿ. ನಾನು ಲೆಕ್ಕ ಕೊಡಲು ತಯಾರಿದ್ದೇನೆ. ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಸಿಎಂ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
