ಯಾವ ಆರೋಪಕ್ಕೂ ಗಮನ ನೀಡದೆ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿದ್ದಾರೆ: ಆರ್ ಅಶೋಕ, ವಿಪಕ್ಷ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Jun 21, 2025 | 2:29 PM

ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಸುಲಿಗೆಯ ಸುಳಿಗೆ ಸಿಕ್ಕಿದೆ, ಯಾವುದೇ ತಪ್ಪು ನಡೆದಿಲ್ಲ, ತಪ್ಪು ಮಾಡಿದವರನ್ನು ಗಲ್ಲುಗಂಬಕ್ಕೆ ಏರಿಸುತ್ತೇವೆ ಎಂದು ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಹೇಳುತ್ತಾರೆ. ಎಷ್ಟು ಜನರನ್ನು ಅವರು ಗಲ್ಲಿಗೇರಿಸುತ್ತಾರೆ? ಎಲ್ಲ 224 ಕ್ಷೇತ್ರಗಳಲ್ಲೂ ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಅಶೋಕ ಹೇಳಿದರು.

ಬೆಂಗಳೂರು, ಜೂನ್ 21: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆಯೆಂದು ಕಾಂಗ್ರೆಸ್ ಶಾಸಕ ಬಿಅರ್ ಪಾಟೀಲ್ ಮಾಡಿರುವ ಅರೋಪ ಸಿದ್ದರಾಮಯ್ಯ ಸರ್ಕಾರವನ್ನು (Siddaramaiah government) ಭಾರೀ ಇಕ್ಕಟ್ಟಿಗೆ ಸಿಲುಕಿಸಿದೆ. ಮಾಧ್ಯಮಗಳೊಂದಿಗೆ ಮಾತಾಡಿದ ವಿಪಕ್ಷ ನಾಯಕ ಅರ್ ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಅರೋಪದ ಬಗ್ಗೆಯೂ ತಲೆಕೆಡಿಸಿಕೊಳ್ಳುತ್ತಿಲ್ಲ, ಅವರು ನಿದ್ರಾದೇವಿಯ ವಶದಲ್ಲಿದ್ದಾರೆ, ವಸತಿ ಇಲಾಖೆಯಲ್ಲಿ ತಿಮಿಂಗಿಲಗಳು ಸೇರಿಕೊಂಡಿವೆ, ಕಾಂಗ್ರೆಸ್ ಶಾಸಕರು ಬಾಯ್ಬಿಟ್ರೆ ಈ ಸರ್ಕಾರ ಒಂದು ದಿನವೂ ಉಳಿಯಲ್ಲ, ಯಾವುದೇ ಅವ್ಯವಹಾರ ನಡೆದಿಲ್ಲವಾದರೆ ಬಿಅರ್ ಪಾಟೀಲ್ ಮತ್ತು ಹೆಚ್​ಕೆ ಪಾಟೀಲ್​ ಮಾಡಿರುವ ಅರೋಪಗಳನ್ನು ಸರ್ಕಾರ ತನಿಖೆಗೆ ಒಪ್ಪಿಸಲಿ ಎಂದು ಅಶೋಕ ಹೇಳಿದರು.

ಇದನ್ನೂ ಓದಿ:  ಸಿದ್ದರಾಮಯ್ಯ ರಿಟೈರ್​ಮೆಂಟ್​​ಗೆ ಹತ್ತಿರವಿರುವ ಔಟ್​​ಗೋಯಿಂಗ್ ಚೀಫ್ ಮಿನಿಸ್ಟರ್: ಆರ್ ಅಶೋಕ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.