AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ನಿವಾಸದಲ್ಲಿ ಕೆಲ ಮಾಜಿ ಶಾಸಕರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ನಿವಾಸದಲ್ಲಿ ಕೆಲ ಮಾಜಿ ಶಾಸಕರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 26, 2025 | 12:57 PM

Share

ಪಕ್ಷದ ಹಾಲಿ ಶಾಸಕರೇ ಸರ್ಕಾರದ ಹಲವು ನಿರ್ಣಯಗಳ ಬಗ್ಗೆ ಅಸಮಾಧಾನಗೊಂಡಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿರುವುದು ಕೊಂಚ ಅಚ್ಚರಿ ಮೂಡಿಸುತ್ತದೆ. ಅಮರೇಗೌಡ ಬಯ್ಯಾಪುರ, ರಾಮಪ್ಪ ಮುಖ್ಯಮಂತ್ರಿಯವರ ಭೇಟಿಗೆ ತಾವಾಗಿಯೇ ಬಂದರೋ ಅಥವಾ ಖುದ್ದು ಮುಖ್ಯಮಂತ್ರಿಯವರು ಕರೆಸಿದ್ದಾರೋ ಅಂತ ಗೊತ್ತಾಗಿಲ್ಲ. ಆರೋಗ್ಯ ವಿಚಾರಿಸಲು ಬಂದಿರುವ ಸಾಧ್ಯತೆ ಇದೆ.

ಬೆಂಗಳೂರು, ಮಾರ್ಚ್ 26 : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಗಲಿಬಿಲಿಯ ಸನ್ನಿವೇಶ ಮೂಡಿರುವುದು ಸುಳ್ಳಲ್ಲ. ಏತನ್ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಕೆಲ ಮಾಜಿ ಶಾಸಕರನ್ನು ಭೇಟಿಯಾಗಿದ್ದಾರೆ. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ, ಮಾಜಿ ಶಾಸಕ ರಾಮಪ್ಪ ಅವರು ಇಂದು ಸಿದ್ದರಾಮಯ್ಯ ನಿವಾಸಕ್ಕೆ ಅಗಮಿಸಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹನಿಟ್ರ್ಯಾಪ್​​ ಕೋಲಾಹಲ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಖರ್ಗೆ, ಮಹತ್ವದ ಚರ್ಚೆ!

Published on: Mar 26, 2025 12:40 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More