ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು.
ದೆಹಲಿ: ನಿರೀಕ್ಷೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ರಾಷ್ಟ್ರದ ರಾಜಧಾನಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಬೇಟಿಯಾದರು. ಗಣ್ಯರ ಭೇಟಿಗೆ ಸಾಕ್ಷಿಯಾಗಿದ್ದು ದೆಹಲಿಯ ಸಂಸತ್ ಭವನ (Parliament House). ಕರ್ನಾಟಕ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು. ರಾಜ್ಯದ ಪರವಾಗಿ ಒಂದು ನೆನಪಿನ ಕಾಣಿಕೆಯನ್ನೂ ಪ್ರಧಾನಿಯವರಿಗೆ ನೀಡಿದರು. ರಾಜ್ಯವೊಂದರ ಮುಖ್ಯಮಂತ್ರಿಯು ಅಧಿಕಾರ ವಹಿಸಿಕೊಂಡು ಸರ್ಕಾರ ರಚಿಸಿದ ಬಳಿಕ ರಾಷ್ಟ್ರದ ಪ್ರಧಾನ ಮಂತ್ರಿಯನ್ನು ಭೇಟಿಯಾಗುವ ಶಿಷ್ಟಾಚಾರ ಭಾರತಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ಡಿಕೆಶಿಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

