AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recovery agents in danger: ಮುಖ್ಯಮಂತ್ರಿಯವರೇ, ಸಾಲಮನ್ನಾಗೆ ಸಂಬಂಧಿಸಿದ ಗೊಂದಲ ಬೇಗ ದೂರಮಾಡಿ!

Recovery agents in danger: ಮುಖ್ಯಮಂತ್ರಿಯವರೇ, ಸಾಲಮನ್ನಾಗೆ ಸಂಬಂಧಿಸಿದ ಗೊಂದಲ ಬೇಗ ದೂರಮಾಡಿ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 16, 2023 | 12:27 PM

Share

ಸಾಲ ಪಡೆದಿರುವ ಮಹಿಳೆಯರು ಅದನ್ನು ಸಿದ್ದರಾಮಯ್ಯ ಮನ್ನಾ ಮಾಡಿದ್ದಾರೆ ಎಂದು ಸಾಲ ವಸೂಲಾತಿಗೆ ಬರುವ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದಾರೆ.

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅತ್ಯಂತ ಜರೂರಾಗಿ ನೋಡಬೇಕಾದ ವಿಡಿಯೋ ಇದು. ಚುನಾವಣೆಗೆ ಮುನ್ನ ಮಹಿಳೆಯರರು ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳಿಂದ (self help groups) ಪಡೆದಿರುವ ಸಾಲ ಮಾಡುವ ಭರವಸೆ ನೀಡಿದ್ದರು. ಅವರು ನೀಡಿದ ಭರವಸೆಗೆ ಕೆಲ ಕಂಡೀಷನ್ ಗಳಿದ್ದವು. ಆದರೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಲ ಮೈಕ್ರೋ ಹಣಕಾಸು ಸಂಸ್ಥೆಗಳಿಂದ (micro finance firms) ಸಾಲ ಪಡೆದಿರುವ ಮಹಿಳೆಯರು ಅದನ್ನು ಸಿದ್ದರಾಮಯ್ಯ  ಮನ್ನಾ ಮಾಡಿದ್ದಾರೆ ಎಂದು ಸಾಲ ವಸೂಲಾತಿಗೆ ಬರುವಸಿಬ್ಬಂದಿಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದಾರೆ. ನೀವಿಲ್ಲಿ ನೋಡುತ್ತಿರೋದು ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನಲ್ಲಿರುವ ಬೈರಕೂರು ಗ್ರಾಮದಲ್ಲಿ ನಡೆದ ದೃಶ್ಯ. ಮಹಿಳೆಯರು ಸಿಬ್ಬಂದಿಯನ್ನು ಎಳೆದಾಡುತ್ತಿದ್ದಾರೆ ಮತ್ತು ಅವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲಮನ್ನಾಗೆ ಸಂಬಂಧಿಸಿದ ಗೊಂದಲವನ್ನು ಕೂಡಲೇ ದೂರಮಾಡದಿದ್ದರೆ, ವಸೂಲಾತಿಗೆ ಹೋಗುವವರಿಗೆ ಅಪಾಯ ತಪ್ಪಿದ್ದಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.