ಪ್ರಧಾನಿ ಮೋದಿ ರೀತಿ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡುತ್ತಾರಾ ಸಿಎಂ? ಸಿದ್ದರಾಮಯ್ಯ ಹೇಳಿದ್ದೇನು ನೋಡಿ

Updated on: May 14, 2026 | 2:40 PM

ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳು ಡೀಸೆಲ್ ಉಳಿತಾಯಕ್ಕಾಗಿ ಬೆಂಗಾವಲು ವಾಹನಗಳನ್ನು ಕಡಿಮೆ ಮಾಡುವ ಕ್ರಮವು ತಾತ್ಕಾಲಿಕವಾಗಿದೆ. ಇದು ಸರಿಯಾದ ಪರಿಹಾರವಲ್ಲ. ಬದಲಾಗಿ, ಇಂಧನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೇರೆ ದೇಶಗಳೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು, ಮೇ 14: ಇಂಧನ ಮಿತ ವ್ಯಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಖುದ್ದು ತಾವೇ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡಿದ್ದಾರೆ. ಅದರಂತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೂಡ ಬೆಂಗಾವಲು ಪಡೆಗಳ ವಾಹನ ಕಡಿಮೆ ಮಾಡುತ್ತಾರಾ? ಈ ಪ್ರಶ್ನೆಗೆ ಖುದ್ದು ಸಿಎಂ ಅವರೇ ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಕೈಗೊಂಡಿರುವ ನಿರ್ಧಾರ ತಾತ್ಕಾಲಿಕ ಕ್ರಮವಷ್ಟೇ. ಅದರ ಬದಲು ಬೇರೆ ದೇಶಗಳೊಂದಿಗೆ ಸಮಾಲೋಚಿಸಿ ಇಂಧನ ಬಿಕ್ಕಟ್ಟು ಬಗೆಹರಿಸಲು ಶಾಶ್ವತ ಕ್ರಮ ಅಗತ್ಯ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More