ಸಚಿವ ಬೈರತಿ ಸುರೇಶ್ ತಾಯಿಯ ವೈಕುಂಠ ಸಮಾರಾಧನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
ಭೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ (85) ಮೇ 24 ರಂದು ದೈವಾಧೀನರಾದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನ ಪಡೆದಿದ್ದರು. ಇವತ್ತಿನ ವೈಕುಂಠ ಸಮಾರಾಧನೆ ಕಾರ್ಯಕ್ರಮಕ್ಕೆ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಸಿಎಂ ಜೊತೆ ಆಗಮಿಸಿದರು.
ಬೆಂಗಳೂರು, ಜೂನ್ 3: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh ) ಅವರ ತಾಯಿ ಸುಶೀಲಮ್ಮನವರವ ವೈಕುಂಠ ಸಮಾರಾಧನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು. ಭೈರತಿಯಲ್ಲಿರುವ ಸಚಿವರ ಸ್ವಗೃಕ್ಕೆ ಸಿದ್ದರಾಮಯ್ಯ ಆಗಮಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಸಚಿವರ ಮಗ ಮತ್ತು ಅವರ ಬೀಗರಾಗಿರುವ ಬಿಜೆಪಿ ಶಾಸಕ ಎಸ್ ಅರ್ ವಿಶ್ವನಾಥ್ ಸೇರಿದಂತೆ ಕುಟುಂಬದ ಹಲವಾರು ಸದಸ್ಯರು ಮತ್ತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು; ಮುಖ್ಯಮಂತ್ರಿ ಮತ್ತು ಅವರೊಂದಿಗೆ ಬಂದ ಮಿನಿಸ್ಟ್ರು, ಶಾಸಕ ಮತ್ತು ಇತರ ಗಣ್ಯರನ್ನು ಸ್ವಾಗತಿಸಿದರು.
ಇದನ್ನೂ ಓದಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ