ಮಂಡಿನೋವಿಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿಯವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಕಳೆದ ತಿಂಗಳು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹಾಸ್ಪಿಟಲ್ ಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಈ ಸ್ವಭಾವವೇ ಕನ್ನಡಿಗರಿಗೆ ಇಷ್ವವಾಗೋದು. ಅವರು ರಾಜಕೀಯ ಮತ್ತು ಖಾಸಗಿ ಬದುಕನ್ನು ಪ್ರತ್ಯೇಕವಾಗಿಡುತ್ತಾರೆ. ರಾಜಕೀಯವೇ ಬೇರೆ ವೈಯಕ್ತಿಕ ಸಂಬಂಧಗಳೇ ಬೇರೆ-ಸೂತ್ರವನ್ನು ಪಾಲಿಸುತ್ತಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಹಳ ದಿನಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದೆ. ಅವರೀಗ ನಗರದ ಖ್ಯಾತ ಅಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಸಹ ಇದ್ದರು. ಕಳೆದ ತಿಂಗಳು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹಾಸ್ಪಿಟಲ್ ಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
