Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ತಮ್ಮ ಗೃಹಕಚೇರಿ 'ಕೃಷ್ಣಾ'ದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಹಮ್ಮಿಕೊಂಡಿರುವ ಈ ಸುದ್ದಿಗೋಷ್ಠಿ ಮಹತ್ವದ್ದಾಗಿದೆ.
ಬೆಂಗಳೂರು, ಮೇ 05: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ತಮ್ಮ ಗೃಹಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಹಮ್ಮಿಕೊಂಡಿರುವ ಈ ಸುದ್ದಿಗೋಷ್ಠಿ ಮಹತ್ವದ್ದಾಗಿದೆ.
ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆಯ ಮತ್ತು ದಾವಣಗೆರೆಯ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಸಂಭ್ರಮವನ್ನು ಸಿಎಂ ಸುದ್ದಿಗಾರರೊಂದಿಗೆ ಹಂಚಿಕೊಳ್ಳುತ್ತಿದ್ದು, ರಾಷ್ಟ್ರ ರಾಜಕೀಯದ ದಿಕ್ಸೂಚಿ ಎನ್ನಲಾಗುತ್ತಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಸಿದ್ದರಾಮಯ್ಯ ಅವರು ತಮ್ಮ ವಿಶ್ಲೇಷಣೆಯನ್ನು ಮಂಡಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 05, 2026 11:59 AM
Follow Us
