Mysore Siddaramaiah Program Live: ಬಿಜೆಪಿ ಮುಖಂಡ ಹೆಚ್​ವಿ ರಾಜೀವ್‌ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಸೇರ್ಪಡೆ

ಮೈಸೂರಿನ ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆ.ಆರ್‌.ಕ್ಷೇತ್ರದ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್‌ ಕಾಂಗ್ರೆಸ್​ ಸೇರ್ಪಡೆಯಾದರು.

Mysore Siddaramaiah Program Live: ಬಿಜೆಪಿ ಮುಖಂಡ ಹೆಚ್​ವಿ ರಾಜೀವ್‌ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಸೇರ್ಪಡೆ
| Updated By: ವಿವೇಕ ಬಿರಾದಾರ

Updated on:Mar 27, 2024 | 1:57 PM

ಮೈಸೂರು, ಮಾರ್ಚ್​ 27: ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆ.ಆರ್‌.ಕ್ಷೇತ್ರದ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್‌, ಕೆ.ಆರ್‌.ಕ್ಷೇತ್ರದ ಜೆಡಿಎಸ್‌ ಮುಖಂಡ, ಪರಾಜಿತ ಅಭ್ಯರ್ಥಿ ಕೆ.ವಿ.ಮಲ್ಲೇಶ್‌, ಮಾಜಿ ಮೇಯರ್ ಭೈರಪ್ಪ ಸೇರಿ ಹಲವರು ಇಂದು (ಮಾ.27) ಕಾಂಗ್ರೆಸ್​ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ, ಸಚಿವ ವೆಂಕಟೇಶ್‌, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿ ಹಲವರು ಭಾಗವಹಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚಾಮುಂಡೇಶ್ವರಿ, ನರಸಿಂಹರಾಜ, ಕೃಷ್ಣರಾಜ, ಚಾಮರಾಜ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 27 March 24

Follow us