ಕಂಠೀರವ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳಿಂದ ಸಿದ್ದರಾಮಯ್ಯಗೆ ಸಿಕ್ಕ ಕರತಾಡನ ಆಶ್ಚರ್ಯ ಮೂಡಿಸುತ್ತದೆ!

ಕಂಠೀರವ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳಿಂದ ಸಿದ್ದರಾಮಯ್ಯಗೆ ಸಿಕ್ಕ ಕರತಾಡನ ಆಶ್ಚರ್ಯ ಮೂಡಿಸುತ್ತದೆ!
|

Updated on: Jul 03, 2024 | 2:22 PM

ಸಿದ್ದರಾಮಯ್ಯರನ್ನು ರಾಜ್ಯದಲ್ಲಿ ಮಾಸ್ ಲೀಡರ್ ಎಂದು ಕರೆಯುತ್ತಾರೆ. ಅವರು ಹೋದೆಡೆಯೆಲ್ಲ ಜನ ಭಾರೀ ಸಂಖ್ಯೆಯಲ್ಲಿ ಸೇರುತ್ತಾರೆ. ಇದನ್ನು ಯಾಕೆ ಹೇಳಬೇಕಾಗಿಯೆಂದರೆ, ಇಂದು ಕಂಠೀರವ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ಅವರನ್ನು ಸ್ವಾಗತಿಸಿದ ರೀತಿ ಆಶ್ಚರ್ಯ ಹುಟ್ಡಿಸಿತು. ವಿದ್ಯಾರ್ಥಿಗಳ ನಡುವೆಯೂ ಅವರು ಸಾಕಷ್ಟು ಜನಪ್ರಿಯರು ಅನ್ನೋದು ಸುಳ್ಳಲ್ಲ.

ಬೆಂಗಳೂರು: ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಪರಿಸರ ನಡಿಗೆ ಮತ್ತು ವನಮಹೋತ್ಸವ-2024 ಹಾಗೂ ಇತರ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಭೂ ಪುನಶ್ಚೇತನ, ಬರ ನಿರ್ವಹಣೆ ಮತ್ತು ಬರಡುಭೂಮಿ ಚೇತರಿಕೆ ಘೋಷ ವಾಕ್ಯದಡಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲೂ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಅವರೊಂದಿಗೆ ಪಾಲ್ಗೊಡರು. ಕ್ರೀಡಾಂಗಣದಲ್ಲಿ ಆಯೋಜಿಲಾಗಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯಮಂತ್ರಿ ಕಾರ್ಯಕ್ರಮ ಉದ್ಘಾಟಿಸಿ ವೇದಿಕೆ ಮೇಲೆ ಬರುತ್ತಿದ್ದಂತೆಯೇ ಕಾರ್ಯಕ್ರಮದ ನಿರೂಪಕರ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಾರೆ ಎಂದು ಘೋಷಿಸಿದ ಕೂಡಲೇ ವಿದ್ಯಾರ್ಥಿಗಳು ಹೋಯ್ ಎಂದು ಅರಚುತ್ತಾ ಕಿವಿಗಡಚಿಕ್ಕುವ ಚಪ್ಪಾಳೆಯೊಂದಿಗೆ ಅವರನ್ನು ಸ್ವಾಗತಿಸುತ್ತಾರೆ. ವೇದಿಕೆಯನ್ನು ಹತ್ತುವ ಮೊದಲು ಸಿದ್ದರಾಮಯ್ಯ ಕ್ರೀಡಾಂಗಣದಲ್ಲಿ ನೆಟ್ಟ ನೂರಾರು ಸಸಿಗಳಿಗೆ ನೀರುಣ್ಣಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ವಿಧಾನಸಭೆಯಲ್ಲಿ ಮೆಜಾರಿಟಿ ಇರೋ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ, ವಿ ಪ ಸದಸ್ಯ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ