ಬೆಳಗಾವಿಯಲ್ಲಿ ಸಿದ್ದರಾಮಯ್ಯ ಪೊಲೀಸ್ ಗೌರವ ಸ್ವೀಕರಿಸುವುದನ್ನು ಡಿಕೆ ಶಿವಕುಮಾರ್ ತದೇಕಚಿತ್ತದಿಂದ ವೀಕ್ಷಿಸಿದರು

Updated on: Aug 11, 2023 | 2:06 PM

ವಿಮಾನವೊಂದರಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ  ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡರು. ನಿಲ್ದಾಣ ಹೊರಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೊಲೀಸ್ ಗೌರವ ಸಲ್ಲಿಸಲಾಯಿತು

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೆಲೆಯನ್ನು ಭದ್ರಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಬೆಳಗಾವಿಯಲ್ಲಿ ವಿವಿಧ ಕಾಮಗಾರಿಗಳನ್ನು (development works) ಉದ್ಘಾಟಿಸಿದರು. ಅದಕ್ಕೂ ಮೊದಲು ವಿಮಾನವೊಂದರಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ  ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡರು. ನಿಲ್ದಾಣ ಹೊರಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೊಲೀಸ್ ಗೌರವ ಸಲ್ಲಿಸಲಾಯಿತು. ಮುಖ್ಮಮಂತ್ರಿ ಪೊಲೀಸ್ ವಂದನೆ ಸ್ವೀಕರಿಸುವುದನ್ನು ಶಿವಕುಮಾರ್ ಕೊಂಚ ದೂರದಲ್ಲಿ ನಿಂತು ವೀಕ್ಷಿಸಿದರು. ಬೆಳಗಾವಿಯಿಂದ ಮುಖ್ಯಮಂತ್ರು ಮತ್ತು ಉಪ ಮುಖ್ಯಮಂತ್ರಿ ಹೆಲಿಕಾಪ್ಟರ್ ಒಂದರಲ್ಲಿ ಅಥಣಿಗೆ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More