ಆಶಾ ಕಾರ್ಯಕರ್ತೆಯರು ಧರಣಿ ನಿಲ್ಲಿಸುತ್ತಾರೆಯೇ ಇಲ್ಲ ಮುಂದುವರಿಸುತ್ತಾರೆಯೇ? ಗೊಂದಲ ಹುಟ್ಟಿಸಿದ ಸಿಎಂ ಮಾತು!

ಅರುಣ್​ ಕುಮಾರ್​ ಬೆಳ್ಳಿ

Updated on: Jan 10, 2025 | 8:19 PM

ಸರ್ಕಾರದ ಬೊಕ್ಕಸದಲ್ಲಿ ದುಡ್ಡೇ ಇಲ್ಲ, ಎಲ್ಲಿಂದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ₹ 10,000 ಎಲ್ಲಿಂದ ಕೊಡುತ್ತಾರೆ ಅಂತ ವಿರೋಧ ಪಕ್ಷಗಳು ಗೇಲಿ ಮಾಡುತ್ತಿವೆ ಅಂದಾಗ ಮುಖ್ಯಮಂತ್ರಿ ಸಮಂಜಸ ಸಮರ್ಥನೆ ನೀಡಲ್ಲ. ಅವರಿಗೆ ₹ 8,000 ಸಿಗುತ್ತಿದೆ, ಇನ್ಸೆನ್ಟಿವ್ ಮೂಲಕ ₹2,000 ಸಿಗುತ್ತದೆ, ಯಾರಿಗಾದರೂ ಇನ್ಸೆನ್ಟಿವ್ ಸಿಗದಿದ್ದರೆ ಅದನ್ನು ಅವರಿಗೆ ತಲುಪಿಸುವ ಕೆಲಸ ಸರ್ಕಾರದಿಂದ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ.

ಮೈಸೂರು: ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಜೊತೆ ತಾವು ಮಾತಾಡಿದ್ದು ಅವರು ಧರಣಿಯನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರತಿ ಆಶಾ ಕಾರ್ಯಕರ್ತೆಗೆ ಇನ್ಸೆನ್ಟಿವ್ ಸೇರಿ ತಿಂಗಳಿಗೆ ₹ 10,000 ನೀಡುವ ಭರವಸೆಯನ್ನು ನೀಡಲಾಗಿದೆ, ಅವರು ಅದಕ್ಕೆ ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಆದರೆ ಮೂಲಗಳ ಪ್ರಕಾರ ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲ ಮತ್ತು ಧರಣಿಯನ್ನು ಮುಂದುವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಂಡಮಾರುತದಿಂದ ಕಾಪಾಡಲು ವೃದ್ಧೆಯನ್ನು ಬೆನ್ನಲ್ಲಿ ಹೊತ್ತು ನಡೆದ ಆಶಾ ಕಾರ್ಯಕರ್ತೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.