ನಮಗೆ ವೋಟು ಹಾಕಿ ಅಧಿಕಾರ ನೀಡಿದ ಜನರನ್ನು ಬಿಜೆಪಿಯಿಂದ ಯಾಮಾರಿಸಲಾಗದು: ಸಿದ್ದರಾಮಯ್ಯ

Updated on: Jul 10, 2024 | 6:59 PM

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣ ಆರಂಭಿಸುವ ಮೊದಲು ಸಂಸದ ಸುನೀಲ್ ಬೋಸ್ ರನ್ನು ಕರೆದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡರು. ಅವರ ಭಾಷಣ ಮುಗಿಯುವರೆಗೆ ಬೋಸ್ ಒಬ್ಬ ವಿಧೇಯ ವಿದ್ಯಾರ್ಥಿಯ ಹಾಗೆ ಕೈಕಟ್ಟಿ ನಿಂತಿದ್ದರು. ಸಿದ್ದರಾಮಯ್ಯ ಹೇಳಿದ ಮಾತುಗಳನ್ನೂ ಅಷ್ಟೇ ವಿಧೇಯನಾಗಿ ಬೋಸ್ ಪಾಲಿಸಿದರೆ ಅವರನ್ನು ಆರಿಸಿದ ಜನ ಸಂತೋಷಪಡುತ್ತಾರೆ.

ಚಾಮರಾಜನಗರ: ನಗರದಲ್ಲಿ ನಡೆದ ಸಂಸದ ಸುನೀಲ್ ಬೋಸ್ ಸತ್ಕಾರ ಸಮಾರಂಭದಲ್ಲಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೇನೇ ಹೇಳಿದರೂ, ಸಾಧನೆಗಳ ಬಗ್ಗೆ ಎಷ್ಟೇ ಕೊಚ್ಚಿಕೊಂಡರೂ ಮತ್ತು ಏನೇ ಬೊಗಳೆ ಬಿಟ್ಟರೂ ಜನ ನೀಡುವ ತೀರ್ಮಾನವೇ ಅಂತಿಮ ಎಂದರು. ಬಿಜೆಪಿ ನಾಯಕರು ಅಂದುಕೊಂಡಿರುವಂತೆ ಮತದಾರರು ದಡ್ಡರಲ್ಲ. ಅವರು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ, ಅದರೆ ಅವರನ್ನು ಯಾಮಾರಿಸುವುದು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಕಳೆದ ಸಲ ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರು, ಅದರೆ ಅವರಲ್ಲಿ ಯಾರೊಬ್ಬರು ರಾಜ್ಯಕ್ಕೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದರೂ ರಾಜ್ಯಕ್ಕೆ ದಕ್ಕಬೇಕಿದ್ದ ಪರಿಹಾರ ನಿಧಿಯ ಬಗ್ಗೆ ಚಕಾರವೆತ್ತಲಿಲ್ಲ, ಅದನ್ನು ಪಡೆಯಲು ರಾಜ್ಯ ಸರ್ಕಾರ ಸುಪ್ರೀಮ್ ಕೋರ್ಟ್ ಮೊರೆ ಹೋಗಬೇಕಾಯಿತು, ಸರ್ವೋಚ್ಛ ನ್ಯಾಯಾಲಯ ಛೀಮಾರಿ ಹಾಕಿದ ನಂತರ ಎನ್​ಡಿಆರ್​ಎಫ್ ಪರಿಹಾರ ನಿಧಿ ಬಿಡುಗಡೆ ಮಾಡಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸುನೀಲ್ ಬೋಸ್ ಸತ್ಕಾರ ಸಮಾರಂಭದಲ್ಲಿ ಮಹಿಳೆಯೊಬ್ಬರು ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More