ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ ರಾಜಕೀಯದಲ್ಲಿ ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ 2026-27ರ ಬಜೆಟ್ ಮಂಡನೆಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಜೆಟ್ ಸಿದ್ಧತೆಗಳು ಈ ತಿಂಗಳಿನಿಂದಲೇ ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ 2026 ಎಲ್ಲರ ಬಾಳಲ್ಲಿ ಸುಖ ಸಂತಸ ತರಲಿ ಎಂದು ಹಾರೈಸಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
