ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಿಂದ 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 14, 2023 | 5:59 PM

ಚುನಾವಣಾ ಸಮಯದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿಗಳನ್ನು ಜನತೆಗೆ ತಲುಪಿಸುವುದು ಸರಕಾರ ಆದ್ಯತೆಯಾಗಿದೆ ಮತ್ತು ಅವುಗಳ ಹೊರತಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 78 ಭರವಸೆಗಳನ್ನು ನೀಡಿದೆ, ಅವೆಲ್ಲವನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಕಾಯಶೀಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ (KPCC office) ನಡೆದ ಸಭೆಯಲ್ಲಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 20 ಸ್ಥಾನ ಗೆದ್ದೇ ಗೆಲ್ಲುತ್ತದೆ ಎಂದು ಪೋಡಿಯಂ ಕುಟ್ಟುತ್ತಾ ಹೇಳಿದರು. ಕರ್ನಾಟಕದಿಂದ 20 ಸ್ಥಾನಗಳನ್ನು ತಪ್ಪದೆ ಗೆದ್ದು ಕೋಡುತ್ತೇವೆ ಅಂತ ಹೈಕಮಾಂಡ್ ಗೆ ಭರವಸೆ ನೀಡಿರುವುದಾಗಿ ಹೇಳಿದ ಸಿದ್ದರಾಮಯ್ಯ 2024 ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಲೆಕ್ಕಕ್ಕೆ ಬರೋದಿಲ್ಲ ಮತ್ತು ಕಳೆದ ಬಾರಿ ಒಂದು ಸ್ಥಾನ ಗೆದ್ದಿದ್ದ ಜೆಡಿಎಸ್ ಪಕ್ಷಕ್ಕೆ ಆ ಸ್ಥಾನವೂ ಈ ಬಾರಿ ದಕ್ಕದು ಎಂದು ಹೇಳಿದರು. ಆದರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೂ ಒಂದೇ ಸೀಟು ಸಿಕ್ಕಿದ್ದನ್ನು ಮರೆತರೋ ಅಥವಾ ಮರೆತಂತೆ ನಟಿಸಿದರೋ ಗೊತ್ತ್ತಾಗಲಿಲ್ಲ. ಮುಂದುವರಿದು ಮಾತಾಡಿದ ಅವರು ಚುನಾವಣಾ ಸಮಯದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿಗಳನ್ನು ಜನತೆಗೆ ತಲುಪಿಸುವುದು ಸರಕಾರ ಆದ್ಯತೆಯಾಗಿದೆ ಮತ್ತು ಅವುಗಳ ಹೊರತಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 78 ಭರವಸೆಗಳನ್ನು ನೀಡಿದೆ, ಅವೆಲ್ಲವನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಕಾಯಶೀಲವಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.