Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದ್ದರೂ ಸಿದ್ದರಾಮಯ್ಯ ನಡಿಗೆ ಮತ್ತು ಗತ್ತಿನಲ್ಲಿ ಬದಲಾವಣೆಯಿಲ್ಲ!

ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದ್ದರೂ ಸಿದ್ದರಾಮಯ್ಯ ನಡಿಗೆ ಮತ್ತು ಗತ್ತಿನಲ್ಲಿ ಬದಲಾವಣೆಯಿಲ್ಲ!

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2023 | 2:23 PM

ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಕೆಲ ಹಿರಿಯ ನಾಯಕರರೊಂದಿಗೆ ನಡೆಸಿದ ಸಭೆಯಲ್ಲಿ ಭ್ರಷ್ಟಾಚಾರದ ಅರೋಪಗಳು ಕೇಳಿಬರುತ್ತಿರುವ ಬಗ್ಗೆ ಚರ್ಚೆ ನಡೆಸಿತ್ತು ಮತ್ತು ನಾಯಕರನ್ನು ತರಾಟೆಗೆ ತೆಗೆದುಕೊಂಡಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಸಂಪುಟ ಸಭೆ ಕರೆದಿರುವ ಹಿನ್ನೆಲೆಯಲ್ಲಿ ವಿಧಾನ ಸೌಧಕ್ಕೆ ಆಗಮಿಸಿದರು. ಸರ್ಕಾರದ ವಿರುದ್ಧ 10-15 ಪರ್ಸೆಂಟ್ ಕಮೀಶನ್ (commission) ಅರೋಪ ಮಾಡುತ್ತಿರುವುದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದರೂ ಮುಖ್ಯಮಂತ್ರಿಯವರ ಮೇಲೆ ಯಾವುದೇ ಪರಿಣಾಮ ಬೀರಿದಂತಿಲ್ಲ. ಅವರ ನಡಿಗೆಯಲ್ಲಿ ಎಂದಿನ ಗಾಂಭೀರ್ಯತೆ ಮತ್ತು ಠೀವಿ! ಅವರ ಹಿಂದೆ ಯಾವಾಗಲೂ ಒಂದು ಪಟಾಲಂ ಇರುತ್ತದೆ. ಸಿದ್ದರಾಮಯ್ಯ ವಿಧಾನ ಸೌಧ (Vidhana Soudha) ಒಳಗಡೆ ಪ್ರವೇಶಿಸುವ ಮೊದಲು ಹಿರಿಯ ವ್ಯಕ್ತಿಯೊಬ್ಬರು ಅವರ ಪಾದಮುಟ್ಟಿ ನಮಸ್ಕಾರ ಮಾಡಿ ಮಾಧ್ಯಮದ ಕೆಮೆರಾಗಳ ಕಡೆ ನೋಡುತ್ತಾರೆ. ತಾನು ಮಾಡಿದ್ದು ಕೆಮೆರಾದಲ್ಲಿ ಸೆರೆಯಾಯಿತೋ ಇಲ್ಲವೋ ಅಂತ ಕೇಳುವಂತಿತ್ತು ಅವರ ಮುಖಭಾವ. ಓಕೆ, ಸಂಪುಟ ಸಭೆಯಲ್ಲಿ ನಿಸ್ಸಂದೇಹವಾಗಿ ಭ್ರಷ್ಟಾಚಾರದ ಆರೋಪಗಳ ಮೇಲೆ ಗಹನವಾದ ಚರ್ಚೆ ನಡೆಯಲಿರುವುದು ನಿಶ್ಚಿತ. ನಿಮಗೆ ನೆನಪಿರಬಹುದು, ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಕೆಲ ಹಿರಿಯ ನಾಯಕರರೊಂದಿಗೆ ನಡೆಸಿದ ಸಭೆಯಲ್ಲಿ ಭ್ರಷ್ಟಾಚಾರದ ಅರೋಪಗಳು ಕೇಳಿಬರುತ್ತಿರುವ ಬಗ್ಗೆ ಚರ್ಚೆ ನಡೆಸಿತ್ತು ಮತ್ತು ನಾಯಕರನ್ನು ತರಾಟೆಗೆ ತೆಗೆದುಕೊಂಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ