ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದ್ದರೂ ಸಿದ್ದರಾಮಯ್ಯ ನಡಿಗೆ ಮತ್ತು ಗತ್ತಿನಲ್ಲಿ ಬದಲಾವಣೆಯಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 10, 2023 | 2:23 PM

ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಕೆಲ ಹಿರಿಯ ನಾಯಕರರೊಂದಿಗೆ ನಡೆಸಿದ ಸಭೆಯಲ್ಲಿ ಭ್ರಷ್ಟಾಚಾರದ ಅರೋಪಗಳು ಕೇಳಿಬರುತ್ತಿರುವ ಬಗ್ಗೆ ಚರ್ಚೆ ನಡೆಸಿತ್ತು ಮತ್ತು ನಾಯಕರನ್ನು ತರಾಟೆಗೆ ತೆಗೆದುಕೊಂಡಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಸಂಪುಟ ಸಭೆ ಕರೆದಿರುವ ಹಿನ್ನೆಲೆಯಲ್ಲಿ ವಿಧಾನ ಸೌಧಕ್ಕೆ ಆಗಮಿಸಿದರು. ಸರ್ಕಾರದ ವಿರುದ್ಧ 10-15 ಪರ್ಸೆಂಟ್ ಕಮೀಶನ್ (commission) ಅರೋಪ ಮಾಡುತ್ತಿರುವುದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದರೂ ಮುಖ್ಯಮಂತ್ರಿಯವರ ಮೇಲೆ ಯಾವುದೇ ಪರಿಣಾಮ ಬೀರಿದಂತಿಲ್ಲ. ಅವರ ನಡಿಗೆಯಲ್ಲಿ ಎಂದಿನ ಗಾಂಭೀರ್ಯತೆ ಮತ್ತು ಠೀವಿ! ಅವರ ಹಿಂದೆ ಯಾವಾಗಲೂ ಒಂದು ಪಟಾಲಂ ಇರುತ್ತದೆ. ಸಿದ್ದರಾಮಯ್ಯ ವಿಧಾನ ಸೌಧ (Vidhana Soudha) ಒಳಗಡೆ ಪ್ರವೇಶಿಸುವ ಮೊದಲು ಹಿರಿಯ ವ್ಯಕ್ತಿಯೊಬ್ಬರು ಅವರ ಪಾದಮುಟ್ಟಿ ನಮಸ್ಕಾರ ಮಾಡಿ ಮಾಧ್ಯಮದ ಕೆಮೆರಾಗಳ ಕಡೆ ನೋಡುತ್ತಾರೆ. ತಾನು ಮಾಡಿದ್ದು ಕೆಮೆರಾದಲ್ಲಿ ಸೆರೆಯಾಯಿತೋ ಇಲ್ಲವೋ ಅಂತ ಕೇಳುವಂತಿತ್ತು ಅವರ ಮುಖಭಾವ. ಓಕೆ, ಸಂಪುಟ ಸಭೆಯಲ್ಲಿ ನಿಸ್ಸಂದೇಹವಾಗಿ ಭ್ರಷ್ಟಾಚಾರದ ಆರೋಪಗಳ ಮೇಲೆ ಗಹನವಾದ ಚರ್ಚೆ ನಡೆಯಲಿರುವುದು ನಿಶ್ಚಿತ. ನಿಮಗೆ ನೆನಪಿರಬಹುದು, ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಕೆಲ ಹಿರಿಯ ನಾಯಕರರೊಂದಿಗೆ ನಡೆಸಿದ ಸಭೆಯಲ್ಲಿ ಭ್ರಷ್ಟಾಚಾರದ ಅರೋಪಗಳು ಕೇಳಿಬರುತ್ತಿರುವ ಬಗ್ಗೆ ಚರ್ಚೆ ನಡೆಸಿತ್ತು ಮತ್ತು ನಾಯಕರನ್ನು ತರಾಟೆಗೆ ತೆಗೆದುಕೊಂಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.