ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿ ಮಾತಾಡಬೇಕೋ ಅಲ್ಲಿ ಮಾತಾಡಲ್ಲ: ವಿ ಸೋಮಣ್ಣ, ಕೇಂದ್ರ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2025 | 8:31 PM

ನಿನ್ನೆ ಸಂಸತ್​ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತಾಡಿದ ಸೋಮಣ್ಣ, ಕಾಂಗ್ರೆಸ್ ಮತ್ತು ಇತರ ವಿರೋಧಪಕ್ಷಗಳಿಗೆ ಆಪರೇಶನ್ ಸಿಂಧೂರದ ಬಗ್ಗೆ ಚರ್ಚೆ ಬೇಕಿರಲಿಲ್ಲ, ಅವರಿಗೆ ಬೇಕಿರುವುದು ಪ್ರಚಾರ, ಲೋಕಸಭಾ ಸ್ಪೀಕರ್ ಅವರು ಪ್ರಶ್ನೋತ್ತರ ವೇಳೆ ಬಹಳ ಅಮೂಲ್ಯವಾದದ್ದು, ಅದು ಮುಗಿದ ಬಳಿಕ ಆಪರೇಶನ್ ಸಿಂಧೂರ ಮೇಲೆ ಚರ್ಚೆಗೆ ಅವಕಾಶ ಮಾಡಿಕೊಡೋದಾಗಿ ಹೇಳಿದರೂ ವಿರೋದ ಪಕ್ಷದವರು ಗಲಾಟೆ ಎಬ್ಬಿಸಿದರು ಎಂದರು.

ತುಮಕೂರು, ಜುಲೈ 22: ನಿನ್ನೆ ದೆಹಲಿಯಲ್ಲಿ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ವಿ ಸೋಮಣ್ಣ ಇವತ್ತು ತುಮಕೂರುನಲ್ಲಿದ್ದರು. ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ವಿಧಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತಾಡಿದ ಅವರು ಸಿದ್ದರಾಮಯ್ಯ (CM Siddaramaiah) ಎಲ್ಲಿ ಮಾತಾಡಬೇಕೋ ಅಲ್ಲಿ ಮಾತಾಡಲ್ಲ, ಪ್ರಧಾನ ಮಂತ್ರಿಯವರು ಕರೆದ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಸೌಜನ್ಯತೆ ಇವರಿಗಿಲ್ಲ, ತೆರಿಗೆ ವಿಷಯವನ್ನು ಅವರು ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಮಾತಾಡಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ 7 ಕೋಟಿ ಕನ್ನಡಿಗರ ಪ್ರತಿನಿಧಿ, ಬೇರೆಯವರ ವಿಷಯದಲ್ಲಿ ಲಘುವಾಗಿ ಮಾತಾಡುವುದನ್ನು ನಿಲ್ಲಿಸಬೇಕು, ರಾಜ್ಯದ ಬೊಕ್ಕಸ ಬರಿದಾಗಿದೆ, ಹಾಗಾಗಿ ಜನರ ಶೋಷಣೆಗೆ ಇಳಿದಿದ್ದಾರೆ ಎಂದು ಸೋಮಣ್ಣ ಹೇಳಿದರು.

ಇದನ್ನೂ ಓದಿ:  ಜನ ನೀಡುವ ಕಾಸಿನಿಂದಲೇ ಕಮಲ್ ಹಾಸನ್ ಒಬ್ಬ ನಟನಾಗಿ ಬೆಳೆದಿದ್ದು: ವಿ ಸೋಮಣ್ಣ, ಕೇಂದ್ರ ಸಚಿವ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.