ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ: ಹೇಳಿದ್ದಿಷ್ಟು

Updated on: Oct 18, 2025 | 8:12 AM

ಜಾತಿ ಗಣತಿ ಶುರುವಾಗಿ 27 ದಿನಗಳೇ ಕಳೆದರೂ ಸಮೀಕ್ಷೆ ಸಂಘರ್ಷ ನಿಲ್ತಿಲ್ಲ. ಕೆಲವರು ಸಮೀಕ್ಷೆಗೆ ಸ್ಪಂದಿಸಿದರೆ, ಇನ್ನೂ ಕೆಲವರು ನಿರಾಕರಿಸ್ತಿದ್ದಾರೆ. ಇತ್ತೀಚೆಗೆ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, ಅಕ್ಟೋಬರ್​ 18: ರಾಜ್ಯ ಸರ್ಕಾರ ಸೆಪ್ಟೆಂಬರ್​ 22 ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಆರಂಭಿಸಿದಾಗಿನಿಂದ್ಲೂ, ಗಣತಿ ಜಟಾಪಟಿ ನಡೀತಾನೆ ಇದೆ. ಮೊನ್ನೆಯಷ್ಟೇ ಇನ್ಫೋಸಿಸ್​ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಇದು ಹಿಂದುಳಿದವರ ಸಮೀಕ್ಷೆ.. ನಾವು ಪಾಲ್ಗೊಳ್ಳಲ್ಲ ಅನ್ನೋ ಹಿಂಬರಹ ಬರೆದು ಕಳಿಸಿದ್ದರು. ಇದೇ ವಿಚಾರ ಕಾಂಗ್ರೆಸ್ ನಾಯಕರನ್ನ ಕೆರಳಿಸಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಹಿಂದುಳಿದವರ ಸಮೀಕ್ಷೆಯಲ್ಲ. ಸುಧಾಮೂರ್ತಿ ದಂಪತಿ ತಪ್ಪು ತಿಳಿದಿದ್ದಾರೆ. ಇದು ಕೇವಲ ಹಿಂದುಳಿದವರ ಸಮೀಕ್ಷೆ ಅನ್ನೋ ಭಾವನೆ ತಪ್ಪು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More