AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಪರಿಷತ್ ನಲ್ಲಿ ಬಿಜೆಪಿ ನಾಯಕ ನಾವು ರಾಷ್ಟ್ರವಾದಿಗಳು ಅಂದಾಗ ಯಾರೀ ರಾಷ್ಟ್ರವಾದಿ ಅಂತ ಗುಡುಗಿದ ಸಿದ್ದರಾಮಯ್ಯ!

Karnataka Budget Session: ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 21, 2024 | 1:05 PM

Share

ಬೆಂಗಳೂರು: ವಿಧಾನ ಸಭೆಯ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಶುರುವಾಗುವ ಚರ್ಚೆಯನ್ನು ಸದಸ್ಯರು ಒಂದು ಕಡೆಯಿಂದ ಮತ್ತೊಂದು ಕಡೆ ಕೊಂಡೊಯ್ಯುವುದು ಸರ್ವೇಸಾಮಾನ್ಯ. ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಲು ಎದ್ದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಚರ್ಚೆಯಲ್ಲಿ 13 ಸದಸ್ಯರು ಭಾಗವಹಿಸಿದ್ದರು ಎಂದು ಹೇಳುತ್ತಾ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು (BJP and JDS) ಈಗ ಎರಡು ಪಕ್ಷಗಳಾಗಿ ವಿಂಗಡಣೆ ಮಾಡಲು ಬರೋದಿಲ್ಲ, ಅವೆರಡು ಒಂದಾಗಿ ಬಿಟ್ಟಿವೆ ಎನ್ನುತ್ತ್ತಾರೆ. ಮುಂದುವರಿದು ಮಾತಾಡುವ ಮುಖ್ಯಮಂತ್ರಿ ಚರ್ಚೆಯಲ್ಲಿ ಒಟ್ಟು 13 ಸದಸ್ಯರು ಮಾತಾಡಿದರು- 7 ಬಿಜೆಪಿ, 5 ಕಾಂಗ್ರೆಸ್ ಮತ್ತು ಒಂದು ಜೆಡಿಎಸ್ ಅಂತ ಅವರು ಹೇಳುತ್ತಿದ್ದಾಗ ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ (communal) ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಆಗ ಬಿಜೆಪಿಯ ಎನ್ ರವಿಕುಮಾರ್ ನಾವು ರಾಷ್ಟ್ರವಾದಿಗಳು ಅಂದಾಗ ಉರಿದು ಬೀಳುವ ಸಿದ್ದರಾಮಯ್ಯ, ಯಾರೀ ರಾಷ್ಟ್ರವಾದಿ? ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ನವರು ರಾಷ್ಟ್ರವಾದಿಗಳು, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದಾಗ ಕೈ ಕಟ್ಟಿ ಕುಳಿತಿದ್ದ ನೀವೆಲ್ಲ ಹೇಗೆ ರಾಷ್ಟ್ರವಾದಿಗಳು ಅಂತ ಕೋಪದಲ್ಲಿ ಹೇಳಿದಾಗ, ಅವರಿಬ್ಬರ ನಡುವೆ ವಾಗ್ವಾದ ಶುರುವಾಗುತ್ತದೆ. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ