AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಪರಿಷತ್ ನಲ್ಲಿ ಬಿಜೆಪಿ ನಾಯಕ ನಾವು ರಾಷ್ಟ್ರವಾದಿಗಳು ಅಂದಾಗ ಯಾರೀ ರಾಷ್ಟ್ರವಾದಿ ಅಂತ ಗುಡುಗಿದ ಸಿದ್ದರಾಮಯ್ಯ!

Karnataka Budget Session: ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 21, 2024 | 1:05 PM

Share

ಬೆಂಗಳೂರು: ವಿಧಾನ ಸಭೆಯ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಶುರುವಾಗುವ ಚರ್ಚೆಯನ್ನು ಸದಸ್ಯರು ಒಂದು ಕಡೆಯಿಂದ ಮತ್ತೊಂದು ಕಡೆ ಕೊಂಡೊಯ್ಯುವುದು ಸರ್ವೇಸಾಮಾನ್ಯ. ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಲು ಎದ್ದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಚರ್ಚೆಯಲ್ಲಿ 13 ಸದಸ್ಯರು ಭಾಗವಹಿಸಿದ್ದರು ಎಂದು ಹೇಳುತ್ತಾ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು (BJP and JDS) ಈಗ ಎರಡು ಪಕ್ಷಗಳಾಗಿ ವಿಂಗಡಣೆ ಮಾಡಲು ಬರೋದಿಲ್ಲ, ಅವೆರಡು ಒಂದಾಗಿ ಬಿಟ್ಟಿವೆ ಎನ್ನುತ್ತ್ತಾರೆ. ಮುಂದುವರಿದು ಮಾತಾಡುವ ಮುಖ್ಯಮಂತ್ರಿ ಚರ್ಚೆಯಲ್ಲಿ ಒಟ್ಟು 13 ಸದಸ್ಯರು ಮಾತಾಡಿದರು- 7 ಬಿಜೆಪಿ, 5 ಕಾಂಗ್ರೆಸ್ ಮತ್ತು ಒಂದು ಜೆಡಿಎಸ್ ಅಂತ ಅವರು ಹೇಳುತ್ತಿದ್ದಾಗ ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ (communal) ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಆಗ ಬಿಜೆಪಿಯ ಎನ್ ರವಿಕುಮಾರ್ ನಾವು ರಾಷ್ಟ್ರವಾದಿಗಳು ಅಂದಾಗ ಉರಿದು ಬೀಳುವ ಸಿದ್ದರಾಮಯ್ಯ, ಯಾರೀ ರಾಷ್ಟ್ರವಾದಿ? ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ನವರು ರಾಷ್ಟ್ರವಾದಿಗಳು, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದಾಗ ಕೈ ಕಟ್ಟಿ ಕುಳಿತಿದ್ದ ನೀವೆಲ್ಲ ಹೇಗೆ ರಾಷ್ಟ್ರವಾದಿಗಳು ಅಂತ ಕೋಪದಲ್ಲಿ ಹೇಳಿದಾಗ, ಅವರಿಬ್ಬರ ನಡುವೆ ವಾಗ್ವಾದ ಶುರುವಾಗುತ್ತದೆ. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ