AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಪರಿಷತ್ ನಲ್ಲಿ ಬಿಜೆಪಿ ನಾಯಕ ನಾವು ರಾಷ್ಟ್ರವಾದಿಗಳು ಅಂದಾಗ ಯಾರೀ ರಾಷ್ಟ್ರವಾದಿ ಅಂತ ಗುಡುಗಿದ ಸಿದ್ದರಾಮಯ್ಯ!

Karnataka Budget Session: ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 21, 2024 | 1:05 PM

Share

ಬೆಂಗಳೂರು: ವಿಧಾನ ಸಭೆಯ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಶುರುವಾಗುವ ಚರ್ಚೆಯನ್ನು ಸದಸ್ಯರು ಒಂದು ಕಡೆಯಿಂದ ಮತ್ತೊಂದು ಕಡೆ ಕೊಂಡೊಯ್ಯುವುದು ಸರ್ವೇಸಾಮಾನ್ಯ. ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಲು ಎದ್ದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಚರ್ಚೆಯಲ್ಲಿ 13 ಸದಸ್ಯರು ಭಾಗವಹಿಸಿದ್ದರು ಎಂದು ಹೇಳುತ್ತಾ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು (BJP and JDS) ಈಗ ಎರಡು ಪಕ್ಷಗಳಾಗಿ ವಿಂಗಡಣೆ ಮಾಡಲು ಬರೋದಿಲ್ಲ, ಅವೆರಡು ಒಂದಾಗಿ ಬಿಟ್ಟಿವೆ ಎನ್ನುತ್ತ್ತಾರೆ. ಮುಂದುವರಿದು ಮಾತಾಡುವ ಮುಖ್ಯಮಂತ್ರಿ ಚರ್ಚೆಯಲ್ಲಿ ಒಟ್ಟು 13 ಸದಸ್ಯರು ಮಾತಾಡಿದರು- 7 ಬಿಜೆಪಿ, 5 ಕಾಂಗ್ರೆಸ್ ಮತ್ತು ಒಂದು ಜೆಡಿಎಸ್ ಅಂತ ಅವರು ಹೇಳುತ್ತಿದ್ದಾಗ ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ (communal) ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಆಗ ಬಿಜೆಪಿಯ ಎನ್ ರವಿಕುಮಾರ್ ನಾವು ರಾಷ್ಟ್ರವಾದಿಗಳು ಅಂದಾಗ ಉರಿದು ಬೀಳುವ ಸಿದ್ದರಾಮಯ್ಯ, ಯಾರೀ ರಾಷ್ಟ್ರವಾದಿ? ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ನವರು ರಾಷ್ಟ್ರವಾದಿಗಳು, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದಾಗ ಕೈ ಕಟ್ಟಿ ಕುಳಿತಿದ್ದ ನೀವೆಲ್ಲ ಹೇಗೆ ರಾಷ್ಟ್ರವಾದಿಗಳು ಅಂತ ಕೋಪದಲ್ಲಿ ಹೇಳಿದಾಗ, ಅವರಿಬ್ಬರ ನಡುವೆ ವಾಗ್ವಾದ ಶುರುವಾಗುತ್ತದೆ. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್