AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಪರಿಷತ್ ನಲ್ಲಿ ಬಿಜೆಪಿ ನಾಯಕ ನಾವು ರಾಷ್ಟ್ರವಾದಿಗಳು ಅಂದಾಗ ಯಾರೀ ರಾಷ್ಟ್ರವಾದಿ ಅಂತ ಗುಡುಗಿದ ಸಿದ್ದರಾಮಯ್ಯ!

Karnataka Budget Session: ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 21, 2024 | 1:05 PM

Share

ಬೆಂಗಳೂರು: ವಿಧಾನ ಸಭೆಯ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಶುರುವಾಗುವ ಚರ್ಚೆಯನ್ನು ಸದಸ್ಯರು ಒಂದು ಕಡೆಯಿಂದ ಮತ್ತೊಂದು ಕಡೆ ಕೊಂಡೊಯ್ಯುವುದು ಸರ್ವೇಸಾಮಾನ್ಯ. ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಲು ಎದ್ದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಚರ್ಚೆಯಲ್ಲಿ 13 ಸದಸ್ಯರು ಭಾಗವಹಿಸಿದ್ದರು ಎಂದು ಹೇಳುತ್ತಾ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು (BJP and JDS) ಈಗ ಎರಡು ಪಕ್ಷಗಳಾಗಿ ವಿಂಗಡಣೆ ಮಾಡಲು ಬರೋದಿಲ್ಲ, ಅವೆರಡು ಒಂದಾಗಿ ಬಿಟ್ಟಿವೆ ಎನ್ನುತ್ತ್ತಾರೆ. ಮುಂದುವರಿದು ಮಾತಾಡುವ ಮುಖ್ಯಮಂತ್ರಿ ಚರ್ಚೆಯಲ್ಲಿ ಒಟ್ಟು 13 ಸದಸ್ಯರು ಮಾತಾಡಿದರು- 7 ಬಿಜೆಪಿ, 5 ಕಾಂಗ್ರೆಸ್ ಮತ್ತು ಒಂದು ಜೆಡಿಎಸ್ ಅಂತ ಅವರು ಹೇಳುತ್ತಿದ್ದಾಗ ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ (communal) ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.

ಆಗ ಬಿಜೆಪಿಯ ಎನ್ ರವಿಕುಮಾರ್ ನಾವು ರಾಷ್ಟ್ರವಾದಿಗಳು ಅಂದಾಗ ಉರಿದು ಬೀಳುವ ಸಿದ್ದರಾಮಯ್ಯ, ಯಾರೀ ರಾಷ್ಟ್ರವಾದಿ? ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ನವರು ರಾಷ್ಟ್ರವಾದಿಗಳು, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದಾಗ ಕೈ ಕಟ್ಟಿ ಕುಳಿತಿದ್ದ ನೀವೆಲ್ಲ ಹೇಗೆ ರಾಷ್ಟ್ರವಾದಿಗಳು ಅಂತ ಕೋಪದಲ್ಲಿ ಹೇಳಿದಾಗ, ಅವರಿಬ್ಬರ ನಡುವೆ ವಾಗ್ವಾದ ಶುರುವಾಗುತ್ತದೆ. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ