Chamarajapet Eidgah Maidan: ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

Updated on: Jun 29, 2023 | 11:36 AM

ಹಾರ-ತುರಾಯಿಗಳಿಂದ ಸನ್ಮಾನ ಬೇಡ ಎಂದು ಸಾರಿರುವ ಮುಖ್ಯಮಂತ್ರಿ ಇಲ್ಲೂ ತಮ್ಮ ಮಾತಿಗೆ ಬದ್ಧರಾಗಿದ್ದರು.

ಬೆಂಗಳೂರು: ರಾಜ್ಯದಾದ್ಯಂತ ಬಕ್ರೀದ್ ಹಬ್ಬವನ್ನು (Bakrid) ಮುಸ್ಲಿಂ ಸಮುದಾಯ ಸಂಭ್ರಮ ಸಡಗರದಿಂದ ಆಚರಿಸುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಾಗಿಯಾಗಿದ್ದರು. ಸಮುದಾಯದ ಮೌಲ್ವಿಗಳು ಮತ್ತು ವಸತಿ ಹಾಗೂ ವಕ್ಫ್ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್  (BZ Zameer Ahmed Khan) ಮುಖ್ಯಮಂತ್ರಿಯವರನ್ನು ಸಾಂಪ್ರದಾಯಿಕ ಮುಸ್ಲಿಂ ವಸ್ತ್ರವನ್ನು ಹೊದಿಸಿ ತಲೆಗೆ ಟೋಪಿ ತೊಡಿಸಿ ಗೌರವಿಸಿದರು. ಹಾರ-ತುರಾಯಿಗಳಿಂದ ಸನ್ಮಾನ ಬೇಡ ಎಂದು ಸಾರಿರುವ ಮುಖ್ಯಮಂತ್ರಿ ಇಲ್ಲೂ ತಮ್ಮ ಮಾತಿಗೆ ಬದ್ಧರಾಗಿದ್ದರು. ಶಾಲು ಮತ್ತು ಗಂಧದ ಹಾರವನ್ನು ಅವರು ನಯವಾಗಿ ತಿರಸ್ಕರಿಸಿದರು. ಹಾರ ಹಾಕಲು ಬಂದಿದ್ದ ವ್ಯಕ್ತಿಯನ್ನು ಜಮೀರ್ ಅಹ್ಮದ್ ಗದರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More