AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮದುವೆ ಆಗೋವರೆಗೂ ಹೋಟೆಲಿನಲ್ಲೇ ಸ್ನಾನ ಮಾಡ್ತಾ ಇದ್ದೆ ಎಂದು ಹಾಸ್ಟೆಲ್​ ವಿದ್ಯಾರ್ಥಿನಿಯರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ನಾನು ಮದುವೆ ಆಗೋವರೆಗೂ ಹೋಟೆಲಿನಲ್ಲೇ ಸ್ನಾನ ಮಾಡ್ತಾ ಇದ್ದೆ ಎಂದು ಹಾಸ್ಟೆಲ್​ ವಿದ್ಯಾರ್ಥಿನಿಯರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಪ್ರಜ್ವಲ್ ಅಮೀನ್​, ಉಡುಪಿ
| Edited By: ಸಾಧು ಶ್ರೀನಾಥ್​|

Updated on:Aug 01, 2023 | 3:42 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಡುಪಿ ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ. ಉಡುಪಿಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್​ಗೆ ಸಿಎಂ ದಿಢೀರ್ ಭೇಟಿ ಕೊಟ್ಟಿದ್ದರು

ಉಡುಪಿ, ಆಗಸ್ಟ್​ 1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಡುಪಿ ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ. ಉಡುಪಿಯ (Udupi) ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್​ಗೆ ಸಿಎಂ ದಿಢೀರ್ ಭೇಟಿ ಕೊಟ್ಟಿದ್ದಾರೆ. ಅಲ್ಲಿನ ಮೆಟ್ರಿಕ್ ನಂತರದ ಸರ್ಕಾರಿ ಹಾಸ್ಟೆಲ್​ ವಿದ್ಯಾರ್ಥಿನಿಯರ (girls hostel) ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದರು. ನಿಮಗೆ ಹಣ ಸಿಗಲ್ಲ, ನಿಮ್ಮ ಅಮ್ಮನಿಗೆ ಹಣ ಸಿಗುತ್ತೆ ಎಂದು ಸಿಎಂ ಹೇಳಿದರು. ಡಿಗ್ರಿ ಪಾಸಾದ ಮೇಲೆ ಕೆಲಸ ಸಿಗುವ ತನಕ ಯುವನಿಧಿ ನೀಡ್ತೇವೆ. ನಿಮ್ಮ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹಾಸ್ಟೆಲ್​ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಉಪಸ್ಥಿತಿಯಿದ್ದರು.

ಈ ವೇಳೆ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರು ತಮ್ಮ ಬೇಡಿಕೆಯನ್ನು ಸಿಎಂ ಮುಂದಿಟ್ಟರು – ಫೈನಲ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅಗತ್ಯ ಇದೆ. ನಮಗೆ ಲ್ಯಾಪ್ ಟಾಪ್ ಕೊಡಿ ಅಂತ ಬೇಡಿಕೆ ಇಟ್ಟರು. ತದನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಊಟ ಏನೇನು ಕೊಡ್ತಾರಮ್ಮಾ? ಅಡುಗೆ ಮಾಡೋಕ್ಕೆ ಬರುತ್ತ ನಿಮಗೆಲ್ಲಾ? ಎಂದು ವಿದ್ಯಾರ್ಥಿನಿಯರಿಗೆ ಕೇಳಿದರು. ಇದೇ ವೇಳೆ, ನಾನು ಮದುವೆ ಆಗೋವರೆಗೂ ಹೋಟೆಲಿನಲ್ಲೇ ಸ್ನಾನ ಮಾಡ್ತಾ ಇದ್ದೆ ಎಂದು ನಗೆಯಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 01, 2023 03:39 PM
Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More