ನನ್ನ ಮಗ ಮತ್ತು ನನ್ನನ್ನು ಸಹಕಾರ ಕ್ಷೇತ್ರದಿಂದ ದೂರ ಮಾಡುವ ಪ್ರಯತ್ನ ಸಿದ್ದರಾಮಯ್ಯ ನಡೆಸಿದ್ದಾರೆ: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2023 | 11:31 AM

ಸಿದ್ದರಾಮಯ್ಯ ಏನೇ ಮಾಡಿದರೂ ಸಹಕಾರಿಗಳು ತಮ್ಮ ಜೊತೆ ಇದ್ದಾರೆ, ಇನ್ನಾರು ತಿಂಗಳಲ್ಲಿ ಚುನಾವಣೆ ನಡೆಸಿದರೆ ಅವರು ಪುನಃ ತಮ್ಮನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಜನರ ಅಭಿವೃದ್ಧಿಗಾಗಿ ಸಹಕಾರ ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ತಾನು ಎಂದು ಜಿಟಿ ದೇವೇಗೌಡ ಹೇಳಿದರು.

ಮೈಸೂರು: ಜೆಡಿಎಸ್ ಪಕ್ಷದ ನಾಯಕ ಜಿಟಿ ದೇವೇಗೌಡ (GT Devegowda) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ನೇಹಿತರೋ ಇಲ್ಲ ವೈರಿಗಳೋ ಅಂತ ಅರ್ಥಮಾಡಿಕೊಳ್ಳುವುದು ಕಷ್ಟ ಮಾರಾಯ್ರೇ. ಮುಖ್ಯಮಂತ್ರಿಯನ್ನು ಗೌಡರು ಒಮ್ಮೆ ಹಾಡಿ ಹೊಗಳಿದರೆ ಮತ್ತೊಮ್ಮೆ ಪಕ್ಕಾ ವೈರಿಯಂತೆ ಮಾತಾಡುತ್ತಾರೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜಿಟಿಡಿ, ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ತನ್ನನ್ನು ಹಾಗೂ ತಮ್ಮ ಪುತ್ರ ಹರೀಶ್ ಗೌಡರನ್ನು (Harish Gowda) ಕ್ಷೇತ್ರದಿಂದ ದೂರ ಸರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ಹಿಂದೆ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಗೌಡರನ್ನು ಸಹಕಾರ ಕ್ಷೇತ್ರದ ಮಹಾಮಂಡಲದಿಂದ ತೆಗೆದುಹಾಕಿದ್ದರಂತೆ. ಈಗ ಹರೀಶ್ ಗೌಡರನ್ನು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಂದ ತೆಗೆಸುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಏನೇ ಮಾಡಿದರೂ ಸಹಕಾರಿಗಳು ತಮ್ಮ ಜೊತೆ ಇದ್ದಾರೆ, ಇನ್ನಾರು ತಿಂಗಳಲ್ಲಿ ಚುನಾವಣೆ ನಡೆಸಿದರೆ ಅವರು ಪುನಃ ತಮ್ಮನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಜನರ ಅಭಿವೃದ್ಧಿಗಾಗಿ ಸಹಕಾರ ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ತಾನು ಎಂದು ಜಿಟಿ ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 14, 2023 11:30 AM
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.