CM in Delhi: ಯಾರೆಲ್ಲ ಸಚಿವರು ಸಾರ್ ಅಂತ ಪತ್ರಕರ್ತರು ಕೇಳಿದರೆ ಶಿಳ್ಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರ!

ಅರುಣ್​ ಕುಮಾರ್​ ಬೆಳ್ಳಿ

Updated on: May 25, 2023 | 6:28 PM

ಆದರೆ, ಮುಖ್ಯಮಂತ್ರಿಗಳು ಮಾತ್ರ ರಾಜೇಶ್ ಖನ್ನಾ ಶೈಲಿಯಲ್ಲಿ ಶಿಳ್ಳೆ ಹಾಕುತ್ತಾ, ಪತ್ರಕರ್ತರತ್ತ ಕೈ ಬೀಸಿ ಅಲ್ಲಿಂದ ತೆರಳಿದರು.

ದೆಹಲಿ: ನಗರದ ಎಐಸಿಸಿ ಕಚೇರಿಯಲ್ಲಿ (AICC office) ಕರ್ನಾಟಕ ಸರ್ಕಾರದ ಸಂಪುಟ ವಿಸ್ತರಣೆ ಸರ್ಕಸ್ ಜಾರಿಯಲ್ಲಿದೆ. ಇವತ್ತು ಸಾಯಂಕಾಲದೊಳಗೆ ಉಳಿದ 20-25 ಸಚಿವರ ಹೆಸರುಗಳು ಹೆಸರುಗಳು ಹೊರಬೀಳಲಿವೆ ಅಂತ ಬೆಳಗ್ಗೆ ವದಂತಿ ಹರಡಿತ್ತು, ಅದರೆ ಅದು ಹುಸಿಹೋಗಿದೆ. ಸಚಿವರ ಹೆಸರುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಇನ್ನೂ 2-3 ದಿನಗಳ ಕಾಲ ನಡೆಯುವ ಹಾಗೆ ಕಾಣುತ್ತಿದೆ. ಎಐಸಿಸಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮೀಟಿಂಗ್ ಗಳನ್ನು ನಡೆಸುತ್ತಲೇ ಇದ್ದಾರೆ. ಅಂಥದೊಂದು ಸಭೆ ಮುಗಿಸಿಕೊಂಡು ಸಿದ್ದರಾಮಯ್ಯ ಹೊರಬಂದಾಗ ಎಂದಿನಂತೆ ಪತ್ರಕರ್ತರು ಅವರನ್ನು ಸುತ್ತುವರಿದು ಯಾರ್ಯಾರ ಹೆಸರು ಅಂತಿಮಗೊಂಡಿದೆ ಅಂತ ಪ್ರಶ್ನಿಸಿದರು. ಆದರೆ, ಮುಖ್ಯಮಂತ್ರಿಗಳು ಮಾತ್ರ ರಾಜೇಶ್ ಖನ್ನಾ ಶೈಲಿಯಲ್ಲಿ ಶಿಳ್ಳೆ ಹಾಕುತ್ತಾ, ಪತ್ರಕರ್ತರತ್ತ ಕೈ ಬೀಸಿ ಅಲ್ಲಿಂದ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.