ಹಾಸನ, ನ.12: ಹಾಸನಾಂಬೆ(Hassanambe) ದರ್ಶನ ಉತ್ಸವದ ಹತ್ತನೇ ದಿನವಾದ ಇಂದು(ನ.12) ಕೂಡ ಭಕ್ತಾಧಿಗಳು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಕೂಡ ಕೆಲ ದಿನಗಳ ಹಿಂದೆ ಆಗಮಿಸಿದ್ದು, ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿತ್ತು. ಇನ್ನು ಈ ಜಾತ್ರೆ ನವೆಂಬರ್ 14 ರ ರಾತ್ರಿಗೆ ಕೊನೆಯಾಗಲಿದೆ. ನವೆಂಬರ್ 15.ಕ್ಕೆ ಹಾಸನಾಂಬೆಯ ದೇಗುಲದ ಗರ್ಭಗುಡಿ ಬಾಗಿಲು ಮುಚ್ಚಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published On - 4:55 pm, Sun, 12 November 23