ಕಾಲ್ತುಳಿತ ನಡೆದು ಜನ ಸತ್ತಿದ್ದು ಮುಖ್ಯಮಂತ್ರಿಯವರಿಗೆ 6 ಗಂಟೆಗೆ ಗೊತ್ತಾಗಿದೆ: ಸತೀಶ್ ಜಾರಕಿಹೊಳಿ, ಸಚಿವ

Updated on: Jun 09, 2025 | 4:13 PM

ಕಾಲ್ತುಳಿತ ಘಟನೆಗೆ ಹೊಣೆ ಯಾರು, ತಪ್ಪಿತಸ್ಥರು ಯಾರು ಅಂತ ಗೊತ್ತಾಗಲು ಇನ್ನೂ 15 ದಿನ ಬೇಕಾಗುತ್ತದೆ. ಸರ್ಕಾರದ್ದೇ ತಪ್ಪು, ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಅಂತ ಈಗಲೇ ಹೇಳಲಾಗದು, ತನಿಖೆಗೆ ಆದೇಶ ನೀಡಲಾಗಿದೆ, ಸರ್ಕಾರ ಕೋರ್ಟ್​ಗೂ ತಪ್ಪು ಯಾರದು ಅಂತ ತಿಳಿಸಬೇಕಿದೆ, ಹಾಗಾಗಿ ಎಲ್ಲರೂ ವರದಿಗಾಗಿ ಕಾಯದೆ ವಿಧಿಯಿಲ್ಲ ಎಂದು ಸಚಿವ ಜಾರಕಿಹೊಳಿ ಹೇಳಿದರು.

ಬೆಂಗಳೂರು, ಜೂನ್ 9: ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು, ಕಳೆದ ಬುಧವಾರದಂದು ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿದ ಘಟನೆ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತೇ ಅಗಿಲ್ಲ ಎಂದು ಹೇಳಿದರು. ವಿಧಾನಸೌಧದ ಬಳಿ ಸತ್ಕಾರ ಸಮಾರಂಭದಲ್ಲಿ ಭಾಗಿಯಾಗ ನಂತರ ಅವರು ಬೇರೆ ಯಾವುದೋ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದ್ದರು, 5.30 ಅಥವಾ 6ಗಂಟೆ ಸುಮಾರಿಗೆ ಅಧಿಕಾರಿಗಳು ಇಲ್ಲವೇ ಪೊಲೀಸರು ಅವರಿಗೆ ವಿಷಯ ತಿಳಿಸಿದ್ದಾರೆ, ಅವರು ಕೂಡಲೇ ಸಮಾರಂಭವನ್ನು ಬಿಟ್ಟು ಆಸ್ಪತ್ರೆಗೆ ಧಾವಿಸಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ಮೆಟ್ಟಿಲೇರಿದ ಡಿಎನ್ಎ ಎಂಟರ್​ಟೈನ್ಮೆಂಟ್, ಸರ್ಕಾರದ ವಿರುದ್ಧ ಗಂಭೀರ ಆರೋಪ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More