AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 15, 2023 | 4:53 PM

ಜೆಡಿಎಸ್ ನಾಯಕರು ಮತ್ತುಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು.

ಬೆಂಗಳೂರು: ಇಂದು ಕೆಪಿಸಿಸಿ ಕಚೇರಿಯಲ್ಲಿ (KPCC office) ಜೆಡಿಎಸ್ ಪಕ್ಷದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ ಹಾಗೂ ಬೊಮ್ಮನಹಳ್ಳಿ ಕ್ಷೇತ್ರ ಧುರೀಣ ಮತ್ತು 2018 ರಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಟಿ ಆರ್ ಬಸವರಾಜ (TR Basavaraj) ಮತ್ತು ಅವರೆಲ್ಲರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು. ಎಲ್ಲರ ಹೆಸರು ಹೇಳಿ ಸ್ವಾಗತಿಸಿದ ಬಳಿಕ ಅವರಾಡಿದ ಮಾತು ಜನರನ್ನು ನಗೆಗಡಲಲ್ಲಿ ಮುಳಗಿಸಿತು. ಅವರು ಹೇಳಿದ್ದೇನು ಅಂತ ನೀವೇ ಕೇಳಿಸಿಕೊಳ್ಳಿ: ಜೆಡಿಎಸ್ ನಾಯಕರ ಕುಟಿಲತನ ಮತ್ತು ಇಬ್ಬಗೆ ಧೋರಣೆಯನ್ನು ಬಹಳ ಬೇಗ ಅರ್ಥ ಮಾಡಿಕೊಂಡು ಅದರಿಂದ ಆಚೆ ಬಂದ ನಿಮ್ಮೆಲ್ಲರಿಗೆ ನಮೋನಮಃ ಎಂದು ಸಿದ್ದರಾಮಯ್ಯ ಹೇಳುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ