ಮುಡಾ ಹಗರಣ: ಸಿಎಂ, ಪತ್ನಿಗೆ ಕ್ಲೀನ್ ಚಿಟ್; ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Updated on: Jan 23, 2025 | 12:05 PM

CM Siddaramaiah's reaction of Lokayukta clean chit to him in MUDA case: ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಹಗರಣದಲ್ಲಿ ಸಿಎಂ ಹಾಗು ಅವರ ಪತ್ನಿಯ ಪಾತ್ರ ಇಲ್ಲ ಎಂದು ಬರೆದಿದೆ ಎಂದು ಹೇಳಲಾಗುತ್ತಿದೆ. ಈ ವರದಿ ಬಗ್ಗೆ ಸಿಎಂ ಅವರ ಪ್ರತಿಕ್ರಿಯೆ ಕೇಳಲಾಗಿದ್ದು, ಅವರು ತನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ.

ಬೆಂಗಳೂರು, ಜನವರಿ 23: ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎನ್ನುವ ಮಾಹಿತಿ ಮಾಧ್ಯಮಗಳಿಗೆ ಸಿಕ್ಕಿದೆ. ಈ ಬಗ್ಗೆ ಮಾಧ್ಯಮಗಳು ಸಿಎಂ ಅವರನ್ನು ಕೇಳಿದಾಗ, ತನಗೇನೂ ಗೊತ್ತಿಲ್ಲರೀ ಎಂದು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ಮುಡಾ ಹಗರಣದಲ್ಲಿ, ಜಮೀನು ಡೀನೋಟಿಫೈ ಮಾಡುವಾಗ ಮತ್ತು ಭೂಪರಿವರ್ತನೆ ಮಾಡುವಾಗ ಮೈಸೂರಿನ ಮುಡಾ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತದ ತನಿಖಾ ವರದಿಯಲ್ಲಿ ಹೇಳಲಾಗಿದೆ. ಆದರೆ, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ಪಾತ್ರ ಎಲ್ಲೂ ಕಂಡು ಬಂದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ಸೋಮವಾರ (ಜ. 27) ಕೋರ್ಟ್​ಗೆ ಸಲ್ಲಿಕೆ ಮಾಡಲಾಗುತ್ತದೆ.

ಇದನ್ನೂ ನೋಡಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More