ಮುಖ್ಯಮಂತ್ರಿ ಬದಲಾಗುತ್ತಾರೆ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ: ಬಸವರಾಜ ರಾಯರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 27, 2025 | 3:01 PM

ಜೋರಾಗಿ ಮಾತಾಡಿದರೆ, ಕೂಗಾಡಿದರೆ ಗುರುತಿಸಲ್ಪಡುತ್ತೇವೆ ಅಂತ ಶಾಸಕರು ಭಾವಿಸಿದ್ದಾರೆ, ನೀವು ಅದನ್ನು ಮಾಡೇ ಉನ್ನತ ಹುದ್ದೆ ಪಡೆದಿದ್ದು ಅಂತ ಪತ್ರಕರ್ತರು ಹೇಳಿದಾಗ, ರಾಯರೆಡ್ಡಿ ಬ್ಯಾಕ್​ಪುಟ್​ಗೆ ಹೋದರು. ತನ್ನದೇನೂ ಉನ್ನತ ಹುದ್ದೆಯಲ್ಲ ಮತ್ತು ವೈಯಕ್ತಿಕವಾಗಿ ಲಾಭದಾಯಕವೂ ಅಲ್ಲ, ಈ ಕಚೇರಿಯೊಂದು ಸಿಕ್ಕಿದೆ, ಹುದ್ದೆ ತ್ಯಜಿಸುವಂತೆ ಹೇಳಿದರೆ ಖುಷಿಯಿಂದ ನಿರ್ಗಮಿಸುತ್ತೇನೆ ಎಂದು ರಾಯರೆಡ್ಡಿ ಹೇಳಿದರು.

ಬೆಂಗಳೂರು, ಜೂನ್ 27: ನಗರದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಅರ್ಥಿಕ ಸಲಹೆಗಾರ (CM’s Financial Advisor) ಬಸವರಾಜ ರಾಯರೆಡ್ಡಿ ಮತ್ತೊಮ್ಮೆ ಸಿಎಂ ಬದಲಾವಣೆ ಆಗುತ್ತಾರೆ ಅಂದರು. ಆದರೆ ಅವರು ಹೇಳಿದ್ದು ಸಿದ್ದರಾಮಯ್ಯ ಮಾನಸಿಕವಾಗಿ ಬದಲಾಗಿ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಯಾದವರು ನಿರ್ಭೀತಿಯಿಂದ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡಾಗ ಮಾತ್ರ ಸರ್ಕಾರದ ಆಡಳಿತ ಚೆನ್ನಾಗಿರುತ್ತದೆ, ಸಿದ್ದರಾಮಯ್ಯ ಮಾನಸಿಕವಾಗೇನೂ ಕುಗ್ಗಿಲ್ಲ ಮತ್ತು ಆಡಳಿತ ತೀರ ಹದಗೆಟ್ಟಿಲ್ಲ, ಸಿಎಂ ದುರ್ಬಲಗೊಂಡಿದ್ದಾರೆ ಯಾರೋ 4 ಜನ ಹೇಳಿದ್ದಕ್ಕೆ ಅವರು ವೀಕ್ ಅನಿಸುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ರಾಯರೆಡ್ಡಿ ಹೇಳಿದರು.

ಇದನ್ನೂ ಓದಿ:  ನಮ್ಮ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಹಾಸು ಹೊಕ್ಕಿದೆ ಎಂದು ಹೇಳಿದ್ದೇನೆ: ಬಸವರಾಜ ರಾಯರೆಡ್ಡಿ, ಶಾಸಕ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.