Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹಂಡೆಯೊಳಗಿದ್ದ ನಾಗರಹಾವು ರಕ್ಷಣೆ, ನಿಟ್ಟುಸಿರುಬಿಟ್ಟ ಮನೆಯವರು

ತುಮಕೂರು: ಹಂಡೆಯೊಳಗಿದ್ದ ನಾಗರಹಾವು ರಕ್ಷಣೆ, ನಿಟ್ಟುಸಿರುಬಿಟ್ಟ ಮನೆಯವರು

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: May 12, 2024 | 8:36 AM

ತುಮಕೂರು ತಾಲೂಕಿನ ಸೀಬಿ ಅಗ್ರಹಾರ ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯ ಹಂಡೆ ಒಲೆ ಒಳಗೆ‌ ಅಡಗಿದ್ದ ನಾಗರ ಹಾವನ್ನು ರಕ್ಷಣೆ ಮಾಡಲಾಗಿದೆ. ಸುಮಾರು 4 ಅಡಿ ಉದ್ದದ ನಾಗರಹಾವನ್ನು ಉರಗ ತಜ್ಞ ಮನು ಅಗ್ನಿವಂಶಿ ಸುರಕ್ಷಿತವಾಗಿ ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ತುಮಕೂರು, ಮೇ.12: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಮನೆಗಳಲ್ಲಿ, ವಾಹನಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿವೆ. ನೀರು ಬಿಸಿ ಮಾಡುವ ಹಂಡೆಯೊಳಗಿದ್ದ ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಸೀಬಿ ಅಗ್ರಹಾರ ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯ ಹಂಡೆ ಒಲೆ ಒಳಗೆ‌ ಅಡಗಿದ್ದ ನಾಗರ ಹಾವನ್ನು ರಕ್ಷಣೆ ಮಾಡಲಾಗಿದೆ. ಸುಮಾರು 4 ಅಡಿ ಉದ್ದದ ನಾಗರಹಾವನ್ನು ಕಂಡು‌ ಮನೆಯವರು ಬೆಚ್ಚಿಬಿದ್ದಿದ್ದರು.

ತಕ್ಷಣ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯವರಿಗೆ (ವಾರ್ಕೊ) ಕರೆಮಾಡಿ ಮಾಹಿತಿ ನೀಡಿದ್ದು ಸಂಸ್ಥೆಯ ಉರಗ ತಜ್ಞ ಮನು ಅಗ್ನಿವಂಶಿ, ನಾಗರ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳ ರಕ್ಷಣೆ ಮಾಡಲು ವಾರ್ಕೊ ಸಂಸ್ಥೆಯ ಸಹಾಯವಾಣಿ 9964519576 ಕರೆ ಮಾಡಬಹುದು ಎಂದು ಉರಗ ತಜ್ಞ ಮನು ತಿಳಿಸಿದ್ದಾರೆ. ಸದ್ಯ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ