ನೀತಿ ಸಂಹಿತೆ: ಸಿಎಂ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರು ತಪಾಸಣೆ ಮಾಡಿದ ಅಧಿಕಾರಿಗಳು

Edited By:

Updated on: Mar 31, 2024 | 8:58 PM

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ.

ಕೋಲಾರ, ಮಾರ್ಚ್​ 31: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ ಪರಮೇಶ್ವರ್‌ ವಧು-ವರರಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್‌ ಸೇರಿ ಹಲವು ನಾಯಕರು ಭಾಗಿ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 31, 2024 08:57 PM
Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More