Karnataka Assembly Polls: ವರುಣಾದಲ್ಲಿ ಜನಸಾಮಾನ್ಯ ಮತ್ತು ಸಿದ್ದರಾಮಯ್ಯ ನಡುವಿನ ಮಾತುಕತೆಗೆ ಬೆಂಬಲಿಗರಿಂದಲೇ ಅಡ್ಡಿ!

ಅರುಣ್​ ಕುಮಾರ್​ ಬೆಳ್ಳಿ

Updated on: Apr 22, 2023 | 5:18 PM

ಗ್ರಾಮವೊಂದರಲ್ಲಿ ಅವರು ಪ್ರಚಾರ ಕಾರ್ಯಪೂರೈಸಿ ತೆರಳುವಾಗ ಅಲ್ಲಿಯ ಹಿರಿಯರೊಬ್ಬರು ಏನನ್ನೋ ಹೇಳಲು ಪ್ರಯತ್ನಿಸುತ್ತಾರೆ.

ಮೈಸೂರು: ಶುಕ್ರವಾರ ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ನಾಯಕರು (BJP leaders) ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು. ಇಂದು ಕೂಡ ಮಾಡುತ್ತಿದ್ದಾರೆ ಆ ವಿಷಯ ಬೇರೆ. ಅದರೆ ಮಾಧ್ಯಮಗಳ ಹೆಚ್ಚಿನ ಫೋಕಸ್ ಇವತ್ತು ಲೋಕಲ್ ಬಾಯ್ ಸಿದ್ದರಾಮಯ್ಯನವರ (Siddaramaiah) ಮೇಲಿದೆ. ವಿರೋಧ ಪಕ್ಷದ ನಾಯಕ ವರುಣಾ ಕ್ಷೇತ್ರದಲ್ಲಿ (Varuna constituency) ಹಳ್ಳಿಹಳ್ಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಅವರು ಹೋದೆಡೆಯೆಲ್ಲ ಅದ್ದೂರಿ ಸ್ವಾಗತ ಸಿಗುತ್ತಿದೆ. ಗ್ರಾಮವೊಂದರಲ್ಲಿ ಅವರು ಪ್ರಚಾರ ಕಾರ್ಯಪೂರೈಸಿ ತೆರಳುವಾಗ ಅಲ್ಲಿಯ ಹಿರಿಯರೊಬ್ಬರು ಏನನ್ನೋ ಹೇಳಲು ಪ್ರಯತ್ನಿಸುತ್ತಾರೆ. ಅವರು ಹೇಳುವುದನ್ನು ಕೇಳಿಸಿಕೊಳ್ಳುವ ಆಸಕ್ತಿ ಸಿದ್ದರಾಮಯ್ಯ ತೋರುತ್ತಾರಾದರೂ ಅಲ್ಲಿ ನೆರದಿದ್ದ ಕಾರ್ಯಕರ್ತರು ಮತ್ತು ಬೆಂಬಲಿಗರು ಆ ಯಜಮಾನರಿಗೆ ಮಾತಾಡಲು ಬಿಡುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.