AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ ಎಸ್​​ಪಿಗೆ ಗಡುವು ನೀಡಿದ ದೂರುದಾರ

ಸಿಎಂ ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ ಎಸ್​​ಪಿಗೆ ಗಡುವು ನೀಡಿದ ದೂರುದಾರ

ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 25, 2024 | 2:53 PM

Share

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶಿಸಿದೆ. ಇದರ ಬೆನ್ನಲ್ಲೇ ಇಂದು(ಬುಧವಾರ) ಸಿಎಂ ವಿರುದ್ದ ಎಫ್ಐಆರ್ ದಾಖಲಿಸುವಂತೆ ದೂರುದಾರ ವಕೀಲ ಪ್ರದೀಪ್ ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ,​ ಸಿಎಂ ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ ಎಸ್ ಪಿಗೆ ಮೂರು ದಿನದ ಗಡುವು ಕೂಡ ನೀಡಿದ್ದಾರೆ.

ಮೈಸೂರು, ಸೆ.25: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶಿಸಿದೆ. ಇದರ ಬೆನ್ನಲ್ಲೇ ಇಂದು(ಬುಧವಾರ) ಸಿಎಂ ವಿರುದ್ದ ಎಫ್ಐಆರ್ ದಾಖಲಿಸುವಂತೆ ದೂರುದಾರ ವಕೀಲ ಪ್ರದೀಪ್ ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ,​ ಸಿಎಂ ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ ಎಸ್​ಪಿಗೆ ಮೂರು ದಿನದ ಗಡುವು ಕೂಡ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಕಾನೂನು ತಜ್ಞರ ಸಲಹೆ ಪಡೆದು ಹಿಂಬರಹ ನೀಡುತ್ತೇವೆ‌‌. ಇದುವರೆಗಿನ ತನಿಖಾ ವರದಿಯ ಕುರಿತು ಮಾಹಿತಿ ನೀಡುತ್ತೇವೆ ಅಂದಿದ್ದಾರೆ. ನಾನು ಇನ್ನು ಮೂರು ದಿನ ಬಿಟ್ಟು ಮತ್ತೆ ಮೈಸೂರಿಗೆ ಬರುತ್ತೇನೆ. ಮೂರು ದಿನದಲ್ಲಿ ಉತ್ತರ ಬಾರದೆ ಇದ್ದರೆ ಮೈಸೂರು ಲೋಕಾಯುಕ್ತ ಎಸ್ ಪಿ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ. ನಮ್ಮ ದೂರಿಗೆ ಹಿಂಬರಹ ನೀಡಲು ಇಷ್ಟೊಂದು ಸಮಯ ಕೇಳುತ್ತಿದ್ದಾರೆ. ಇನ್ನು ತನಿಖೆ ಯಾವ ರೀತಿ ಮಾಡುತ್ತಾರೆ ಎಂಬ ಪ್ರಶ್ನೆ ನಮಗೆ ಕಾಡುತ್ತಿದೆ ಎಂದು ಮೈಸೂರಿನಲ್ಲಿ ದೂರುದಾರ ಪ್ರದೀಪ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 25, 2024 02:53 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More