ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

Updated on: Apr 21, 2026 | 7:30 PM

ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಈಗ ಕಾಂಪ್ರಾಮೈಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಈಗ ಅವರಿಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯವಾಗಿದೆ. ಎಲ್ಲಾ ಸಮಯದಲ್ಲೂ ಒಂದೇ ರೀತಿ ರಾಜಕಾರಣ ಮಾಡಲಾಗಲ್ಲ. ಕಾಂಪ್ರಾಮೈಸ್ ಅನಿವಾರ್ಯ ಎಂದು ಹೇಳಿದ್ದಾರೆ.

ಮೈಸೂರು, (ಏಪ್ರಿಲ್ 21): ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ, ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ ಎಂದು ಮೊನ್ನೆ ಅಷ್ಟೇ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಇಂದು (ಏಪ್ರಿಲ್ 21) ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಹೀಗೆ ಸಿದ್ದರಾಮಯ್ಯ ಮೌನದ ಬಗ್ಗೆ ನಾನಾ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಇತ್ತ ಸತೀಶ್ ಜಾರಿಹೊಳಿ ಸಹ ಸಿಎಂಗೆ ಈಗ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯವಾಗಿದೆ ಎಂದಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಈಗ ಕಾಂಪ್ರಾಮೈಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಈಗ ಅವರಿಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯವಾಗಿದೆ. ಎಲ್ಲಾ ಸಮಯದಲ್ಲೂ ಒಂದೇ ರೀತಿ ರಾಜಕಾರಣ ಮಾಡಲಾಗಲ್ಲ. ಕಾಂಪ್ರಾಮೈಸ್ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

Published on: Apr 21, 2026 07:29 PM
Follow Us