JDS ಕಾರ್ಯಕರ್ತರು, ಪ್ರೀತಂ ಗೌಡ ಬೆಂಬಲಿಗರ ನಡುವಿನ ಸಂಘರ್ಷ; ಅಸಲಿ ಕಾರಣ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ ಆಪ್ತ

JDS ಕಾರ್ಯಕರ್ತರು ಮತ್ತು ಪ್ರೀತಂ ಗೌಡ ಬೆಂಬಲಿಗರ ನಡುವಿನ ಸಂಘರ್ಷಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ ಆಪ್ತ ಅವಿನಾಶ್​, ‘ರಾಜಕೀಯದಲ್ಲಿ ಒಕ್ಕಲಿಗ ನಾಯಕತ್ವ ಇದ್ದರೆ ಅದು ದೇವೇಗೌಡರ ಕುಟುಂಬಕ್ಕೆ ಮಾತ್ರ, ಪ್ರೀತಂ ಗೌಡ ನಂತಹ ಎಷ್ಟೇ ಜನ ಹುಟ್ಟಿ ಬಂದರೂ ಒಕ್ಕಲಿಗ ನಾಯಕ ಆಗಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

JDS ಕಾರ್ಯಕರ್ತರು, ಪ್ರೀತಂ ಗೌಡ ಬೆಂಬಲಿಗರ ನಡುವಿನ ಸಂಘರ್ಷ; ಅಸಲಿ ಕಾರಣ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ ಆಪ್ತ
|

Updated on:Aug 08, 2024 | 7:40 PM

ಮಂಡ್ಯ, ಆ.08: ನಿನ್ನೆ(ಆ.07) ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಪ್ರೀತಂ ಗೌಡ ಬೆಂಬಲಿಗರ ನಡುವಿನ ಸಂಘರ್ಷದಲ್ಲಿ ಪ್ರೀತಂ ಗೌಡ ಬೆಂಬಲಿಗರನ್ನು ರಸ್ತೆಯಲ್ಲಿ ಅಡ್ಡಗಟ್ಟಿದ್ದ ಹಾಗೂ ಫ್ಲೆಕ್ಸ್​ಗೆ ಬೆಂಕಿಯಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೆಡಿಎಸ್ ಕಾರ್ಯಕರ್ತ ಮತ್ತು ನಿಖಿಲ್ ಕುಮಾರಸ್ವಾಮಿ ಆಪ್ತ ಅವಿನಾಶ್, ‘ ಪ್ರೀತಂ ಗೌಡ ಬೆಂಬಲಿಗರು ಘೋಷಣೆ ಕೂಗುತ್ತಿದ್ದ ಬಗ್ಗೆ ಮೊದಲೇ ನಾವು ವಿಜಯೇಂದ್ರ ಗಮನಕ್ಕೆ ತಂದಿದ್ದೆವು. ಪ್ರೀತಂ ಗೌಡ ಮಂಡ್ಯಕ್ಕೆ ಯಾವ ಗೌಡನೂ ಅಲ್ಲ. ಆತನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಬೇಕು. ಒಬ್ಬ ಮಾಜಿ ಶಾಸಕನಿಂದ ಇಷ್ಟೆಲ್ಲಾ ಕಲಹ ಆಗುತ್ತಿದೆ. ಅವನದ್ದು ಏನಿದ್ದರೂ ಹಾಸನದಲ್ಲಿ ಇಟ್ಟುಕೊಳ್ಳಬೇಕು. ಅವನ ದುರಂಹಕಾರಕ್ಕೆ ಹಾಸನದ ಜನರೇ ಬುದ್ದಿ ಕಲಿಸಿದ್ದಾರೆ. ಅವನು ಇನ್ನೂ ದುರಂಹಕಾರ ಬಿಟ್ಟಿಲ್ಲ.

ರಾಜಕೀಯದಲ್ಲಿ ಒಕ್ಕಲಿಗ ನಾಯಕತ್ವ ಇದ್ದರೆ ಅದು ದೇವೇಗೌಡರ ಕುಟುಂಬಕ್ಕೆ ಮಾತ್ರ, ಪ್ರೀತಂ ಗೌಡ ನಂತಹ ಎಷ್ಟೇ ಜನ ಹುಟ್ಟಿ ಬಂದರೂ ಒಕ್ಕಲಿಗ ನಾಯಕ ಆಗಲು ಸಾಧ್ಯವಿಲ್ಲ. ಜೆಡಿಎಸ್ ಬೆಂಬಲದಿಂದಲೇ ಬಿಜೆಪಿ 5 ಸಂಸದ ಸ್ಥಾನ ಹೆಚ್ಚು ಗೆದ್ದಿದೆ. ದೇವೇಗೌಡರ ಕುಟುಂಬ ಎದುರು ಹಾಕಿಕೊಂಡು ಗೆದ್ದವರು ತುಂಬಾ ಕಡಿಮೆ. ಇಂದಿನ ಬೆಳವಣಿಗೆಗಳು ಪ್ರೀತಂ ಗೌಡಗೆ ಒಳ್ಳೆಯದಲ್ಲ. ಸಿಡಿಗಳಿಗೆ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದರೆ, ಸಿಡಿ ಮತ್ತು ಪೆನ್ ಡ್ರೈವ್ ಗಳಿಗೆ ಪ್ರೀತಂ ಗೌಡ ಉಪಾಧ್ಯಕ್ಷ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Thu, 8 August 24

Follow us
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ