ಬೆಂಗಳೂರು, ಸೆಪ್ಟೆಂಬರ್ 14: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ