AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ, ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ, ಅಷ್ಟಕ್ಕೂ ಆಗಿದ್ದೇನು?

ಪ್ರಸನ್ನ ಗಾಂವ್ಕರ್​
| Edited By: |

Updated on: Aug 06, 2026 | 4:25 PM

Share

ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಕ್ಕಿಲ್ಲವೆಂದು ಹಲವು ಹಿರಿಯ-ಕಿರಿಯ ಶಾಸಕರು ಬೇಸರಗೊಂಡಿದ್ದು, ಅವರನ್ನ ಮನವೊಲಿಸುವ ಯತ್ನವೂ ಸಹ ನಡೆದಿದೆ. ಇದರ ಮಧ್ಯೆ ಇನ್ನೊಂದೆಡೆ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೀವ್ರ ಬೇಸರಗೊಂಡಿರುವ ಹೆಚ್ ಸಿ ಮಹದೇವಪ್ಪ ಅವರು ದೆಹಲಿಗೆ ಹಾರಿದ್ದಾರೆ.

ಬೆಂಗಳೂರು, (ಆಗಸ್ಟ್ 06): ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಕ್ಕಿಲ್ಲವೆಂದು ಹಲವು ಹಿರಿಯ-ಕಿರಿಯ ಶಾಸಕರು ಬೇಸರಗೊಂಡಿದ್ದು, ಅವರನ್ನ ಮನವೊಲಿಸುವ ಯತ್ನವೂ ಸಹ ನಡೆದಿದೆ. ಇದರ ಮಧ್ಯೆ ಇನ್ನೊಂದೆಡೆ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ  (Siddaramaiah) ಮೇಲೆ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೀವ್ರ ಬೇಸರಗೊಂಡಿರುವ ಹೆಚ್ ಸಿ ಮಹದೇವಪ್ಪ ಅವರು ದೆಹಲಿಗೆ ಹಾರಿದ್ದಾರೆ.

ಸಚಿವ ಸ್ಥಾನಕ್ಕೆ ಸಿದ್ದರಾಮಯ್ಯನವರು ತಮ್ಮ ಹೆಸರು ಶಿಫಾರಸು ಮಾಡಿದ್ದಾರೆ ಎಂದು ಹಲವು ಶಾಸಕರು ನಂಬಿದ್ದರು. ಆದ್ರೆ, ಸುರ್ಜೆವಾಲಾ ಜೊತೆಗೆ ಚರ್ಚೆ ವೇಳೆ ರಾಜ್ಯ ನಾಯಕರು ಶಿಫಾರಸು ಮಾಡಿದ್ದ ಹೆಸರುಗಳು ಬಹಿರಂಗವಾಗಿದ್ದು, ಆಂತರಿಕ ಚರ್ಚೆ ವೇಳೆ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ ರೆಫರ್ ಮಾಡಿದ್ದ ಲಿಸ್ಟ್ ಬಿಚ್ಚಿಡಲಾಗಿದೆ. ಈ ವೇಳೆ ಸಿದ್ದರಾಮಯ್ಯ ಕೆಲವೇ ಕೆಲವು ಹೆಸರುಗಳನ್ನು ಮಾತ್ರ ಶಿಫಾರಸು ಮಾಡಿದ್ದರು ಎನ್ನುವುದು ಗೊತ್ತಾಗಿದೆ. ಅಹಿಂದ ಶಾಸಕರ ಪರವಾಗಿ ಸಿದ್ದರಾಮಯ್ಯ ಪ್ರಬಲ ವಾದ ಮಂಡಿಸಿಲ್ಲ. ಸಿದ್ದರಾಮಯ್ಯ ತಮಗೆ ಸಚಿವ ಸ್ಥಾನ ಕೊಡಿಸುತ್ತಾರೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದರು. ಆದ್ರೆ, ಇದೀಗ ಎಲ್ಲ ಸಚಿವ ಸ್ಥಾನಕ್ಕೆ ತಮ್ಮ ಹೆಸರುಗಳನ್ನ ಶಿಫಾರಸ್ಸು ಮಾಡಿಲ್ಲ ಎನ್ನುವುದು ಗೊತ್ತಾಗುತ್ತಿದ್ದಂತೆಯೇ ಸಿದ್ದರಾಮಯ್ಯನವರ ನಡೆಗೆ ಅಸಮಾಧಾನಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us