ಬೆಳಗಾವಿ ಕಾಂಗ್ರೆಸ್ ಅಧಿವೇಶನ; ಸಿದ್ದರಾಮಯ್ಯ ಏರ್ಪಡಿಸಿರುವ ಲಂಚ್ ನಂತರ ಕಾರ್ಯಕ್ರಮ ಶುರುವಾಗಲಿದೆ: ಡಿಕೆ ಶಿವಕುಮಾರ್
ಬೆಳಗಾವಿ ಕಾಂಗ್ರೆಸ್ ಅಧಿವೇಶನವನ್ನು ವಿರೋಧಿಗಳು ಜಾತ್ರೆ ಅನ್ನೋದಾದರೆ ಇದು ಜಾತ್ರೆಯೇ ಸರಿ, ಸಂಕ್ರಮಣ ಬಂದಾಗ ರೈತನಿಗೆ ಜಾತ್ರೆ, ಹಾಗೆಯೇ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕಾಂಗ್ರೆಸ್ಸಿಗರಿಗೆ ಜಾತ್ರೆ, ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಪಕ್ಷವನ್ನು ಪುನರುಜ್ಜೀವಗೊಳಿಸಲು, ಪುನಶ್ಚೇತನಗೊಳಿಸಲು, ಅದಕ್ಕೆ ಜೀವ ತುಂಬಲು ಕಾಂಗ್ರೆಸ್ ನಾಯಕರೆಲ್ಲ ಶ್ರಮಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶುರುವಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ, ಮೊದಲಿಗೆ ಸುವರ್ಣ ಸೌಧದಲ್ಲಿ ಗಾಂಧಿ ಪುತ್ಥಳಿ ಅನಾವರಣವಾಗುತ್ತದೆ, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಲಂಚ್ ನಲ್ಲಿ ಎಲ್ಲರೂ ಭಾಗಿಯಾಗುತ್ತಾರೆ ಎಂದು ಹೇಳಿದರು. ಊಟದ ನಂತರ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಥೀಮಿನ ಮೇಲೆ ಕಾಂಗ್ರೆಸ್ ಸಮಾವೇಶ ನಡೆಯುತ್ತದೆ, ರೀತಿ-ನೀತಿ-ನಿಯಮಗಳನ್ನು ಬೋಧಿಸುವ ಸಂವಿಧಾನವನ್ನು ಎಲ್ಲರೂ ರಕ್ಷಿಸಬೇಕಿದೆ, ಕಾಂಗ್ರೆಸ್ ನೀಡಿರುವ ಕೊಡುಗೆಯನ್ನು ಇಡೀ ವಿಶ್ವವೇ ಸ್ಮರಿಸುತ್ತದೆ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಚಿವರೊಂದಿಗೆ ನಗರಕ್ಕೆ ಆಗಮಿಸಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್
Loading...
Unable to load recommendations.
Follow Us