Madikeri; ಎಲ್ಲಾದಕ್ಕೂ ಪರ್ಸೆಂಟೇಜ್ ನಿಗದಿ ಮಾಡಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯದು: ಆರ್ ಅಶೋಕ, ಶಾಸಕ

Updated on: Jun 29, 2023 | 6:43 PM

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿದು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಆರ್ ಅಶೋಕ ಕರೆ ನೀಡಿದರು.

ಮಡಿಕೇರಿ: ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಶಾಸಕ ಆರ್ ಅಶೋಕ (R Ashoka) ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ (Congress government) ಬಹಳ ದಿನ ಉಳಿಯಲ್ಲ ಎಂದು ಹೇಳಿದರು. ಸರ್ಕಾರದಲ್ಲಿ ಈಗಾಗಲೇ ಪರ್ಸೆಂಟೇಜ್ (percentage) ವ್ಯವಹಾರ ಶುರುವಾಗಿದೆ, ವರ್ಗಾವಣೆಗೆ ಇಷ್ಟು, ಬಿಲ್ ಗಳನ್ನು ಪಾಸ್ ಮಾಡಲು ಇಂತಿಷ್ಟು, ಪ್ಲ್ಯಾನ್ ಗಳನ್ನು ಮಂಜೂರು ಮಾಡಲು ಇಷ್ಟು ಹಣ ಅಂತ ನಿಗದಿ ಮಾಡಲಾಗಿದೆ ಎಂದು ಮಾಜಿ ಸಚಿವ ಹೇಳಿದರು. ಕಳೆದ ವಿಧಾನ ಸಭೆಯಲ್ಲಿ ಸೋತಿರುವ ಕಾರಣಕ್ಕೆ ಎದೆಗುಂದುವ ಅವಶ್ಯಕತೆಯಿಲ್ಲ, ನಾವು ಹೋರಾಟ ಮಾಡುವುದನ್ನು ನಿಲ್ಲಿಸಬಾರದು, ವಿಧಾನ ಸಭೆಯ ಒಳಗಡೆ ಮತ್ತು ಹೊರಗಡೆ-ಎರಡೂ ಕಡೆ ಹೋರಾಟ ಜಾರಿಯಲ್ಲಿಡಬೇಕು ಎಂದು ಅಶೋಕ ಹೇಳಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿದು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಆರ್ ಅಶೋಕ ಕರೆ ನೀಡಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More