ಕಾಂಗ್ರೆಸ್  ಸರ್ಕಾರ ಇರುವೆಡೆಯೆಲ್ಲ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ: ಪ್ರಲ್ಹಾದ್ ಜೋಶಿ

Updated on: Apr 07, 2025 | 10:31 AM

ಪೆಟ್ರೋಲಿಯಂ ಪದಾರ್ಥಗಳಲ್ಲಿ ಕಲಬೆರಕೆ ವಿಷಯದಲ್ಲಿ ಮಾತಾಡಿದ ಪ್ರಲ್ಹಾದ್ ಜೋಶಿ, ಅದು ರಾಜ್ಯದಲ್ಲಿ ನಡೆದಿದ್ದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ, ಕೇಂದ್ರ ಸರ್ಕಾರ ಕಾನೂನು ಮತ್ತು ನಿಯಮಗಳನ್ನು ರೂಪಿಸುತ್ತದೆ, ಅದರೆ ಅವುಗಳನ್ನು ಜಾರಿಗೊಳಿಸುವುದನ್ನು ರಾಜ್ಯ ಸರ್ಕಾರಗಳು ಮಾಡುತ್ತವೆ, ಗ್ರಾಹಕರು ಸಹಾಯವಾಣಿಯಲ್ಲಿ ದೂರು ದಾಖಲಿಸಿದರೆ ಅದನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಜೋಶಿ ಹೇಳಿದರು.

ಹುಬ್ಬಳ್ಳಿ, ಏಪ್ರಿಲ್ 7: ಕಾಂಗ್ರೆಸ್ ಪಕ್ಷ ಇದ್ದೆಡೆಯೆಲ್ಲ ಕಾನೂನುಬಾಹಿರ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತವೆ, ಕ್ರಿಮಿನಲ್ ಗಳಿಗೆ, ಅಕ್ರಮ ಕೆಲಸಗಳಲ್ಲಿ ಭಾಗಿಯಾಗುವವರಿಗೆ ಕಾಂಗ್ರೆಸ್ ಪಕ್ಷ ಸ್ವರ್ಗವಿದ್ದಂತೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇದು ಕೇವಲ ರಾಜಕೀಯ ಹೇಳಿಕೆ ಅಲ್ಲ, ಹಿಂದೆ ತಾನು ಕಂಡಿರುವ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ, ಕ್ರಿಮಿನಲ್ ಗಳಿಗೆ ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳೊಂದಿಗೆ ಬಾಂಧ್ಯವ್ಯ ಇರುತ್ತದೆ, ಹಾಗಾಗಿ ಅವರ ವಿರುದ್ಧ ಯಾವ ಕ್ರಮವೂ ಜರುಗಲ್ಲ ಎಂದು ಜೋಶಿ ಹೇಳಿದರು.

ಇದನ್ನೂ ಓದಿ:  ಕೇರಳ ಬಿಜೆಪಿ ಅಧ್ಯಕ್ಷರಾಗಿ ರಾಜೀವ್‌ ಚಂದ್ರಶೇಖರ್‌ ನೇಮಕ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 07, 2025 10:31 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More