ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇಲ್ಲ: ಪ್ರಲ್ಹಾದ್ ಜೋಶಿ

Edited By:

Updated on: Feb 17, 2025 | 2:03 PM

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ದಿವಾಳಿಯಾಗುವ ಸ್ಥಿತಿ ತಲುಪಿದ್ದು, ಯಾವುದಕ್ಕೂ ಅವರ ಬಳಿ ಹಣವಿಲ್ಲ. ಗೃಹಲಕ್ಷ್ಮಿ ಹಣ ಕೊಡಲು ಅವರ ಬಳಿ ಇಲ್ಲ, ಅನ್ನಭಾಗ್ಯ ಅಕ್ಕಿ ಖರೀದಿಗೂ ದುಡ್ಡಿಲ್ಲ ಎಂದರು.

ಹುಬ್ಬಳ್ಳಿ, ಫೆಬ್ರವರಿ 17: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಕೇಂದ್ರದ ಮೋದಿ ಸರ್ಕಾರ ಕಾರಣ ಎಂದರು. ಆಮೇಲೆ ಕಡಿಮೆ ನಾವು ಮಾಡಿದ್ದೇವೆ ಎಂದರು. ಹೆಚ್ಚು ಮಾಡುವುದು ಮೋದಿ ಸರ್ಕಾರ ಆದರೆ ಇವರು ಹೇಗೆ ಕಡಿಮೆ ಮಾಡುವುದು ಎಂದು ಪ್ರಶ್ನಿಸಿದರು.

ಗೃಹಲಕ್ಷ್ಮೀ ಹಣ ಬಂದಿಲ್ಲ, ಅನ್ನಭಾಗ್ಯ ಅಕ್ಕಿನೂ ಬಂದಿಲ್ಲ. ನಾವು ಅಕ್ಕಿ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಖರೀದಿಸ್ತಿಲ್ಲ. ಇದೀಗ ಅಕ್ಕಿಯೂ ನೀಡ್ತಿಲ್ಲ, ಹಣವೂ ನೀಡ್ತಿಲ್ಲ. ನಮ್ಮ ಬಳಿ ಅಕ್ಕಿ ಇದೆ ಎಂದು ಜೂನ್ ತಿಂಗಳಿನಲ್ಲೇ ಹೇಳಿದ್ದೇನೆ. ಮೊದಲು ಕೆಜಿಗೆ 34 ರೂ. ಇತ್ತು, ಈಗ 28 ರೂ.ಗೆ ಕೊಡುತ್ತೇವೆ ಎಂದರೂ ಖರೀದಿಸ್ತಿಲ್ಲ. ಸಚಿವ ಮುನಿಯಪ್ಪ ಭೇಟಿ ಮಾಡಿ ಹೋದರೂ ಅಕ್ಕಿ ಆರ್ಡರ್ ಮಾಡಿಲ್ಲ. ಯಾಕೆಂದರೆ ಖರೀದಿಸಲು ಅವರ ಬಳಿ ದುಡ್ಡಿಲ್ಲ ಎಂದು ಜೋಶಿ ಟೀಕಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More